Categories: ಕೋಲಾರ

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಬಿಡುಗಡೆಗೆ ಎಂಎಲ್ಸಿ ಅನಿಲ್ ಕುಮಾರ್ ಒತ್ತಾಯ

ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.

ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.

2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

3 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

12 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

18 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago