Categories: ಕೋಲಾರ

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಬಿಡುಗಡೆಗೆ ಎಂಎಲ್ಸಿ ಅನಿಲ್ ಕುಮಾರ್ ಒತ್ತಾಯ

ಕೋಲಾರ: ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿನ ಸಾರ್ವಜನಿಕರ ಮಹತ್ವದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಯಾಕೆ ಇದರ ಹಿಂದಿರುವ ಹುನ್ನಾರವಾದರೂ ಏನು ಎಂಬುದನ್ನು ಸದನಕ್ಕೆ ತಿಳಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಒತ್ತಾಯಿಸಿದರು.

ಕಳೆದ 2022-23ನೇ ಸಾಲಿನ ಅವಧಿಯಲ್ಲಿ ಸುಮಾರು 99 ಶಾಸಕರಿಗೆ ಅಭಿವೃದ್ಧಿ ಮಂಡಳಿಯಿಂದ ತಲಾ ಒಂದು ಕೋಟಿ ಅನುದಾನವನ್ನು ಕಾಮಗಾರಿಗಳಿಗೆ ನೀಡುವಂತೆ ಸೂಚಿಸಿದ್ದು, ಅದರಂತೆ ಇದುವರೆಗೂ ಯಾವುದೇ ರೀತಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಏಕೆ? ಸುಮಾರು 362 ಕೋಟಿ ಅನುದಾನವನ್ನು ಸರಕಾರದ ಅನುಮೋದನೆ ಇಲ್ಲದೇ ಬಳಸಿಕೊಳ್ಳುತ್ತಾರೆ ಎಂದರೆ ಮನವಿ ಕೊಟ್ಟ ಶಾಸಕರಿಗೆ ಬೆಲೆ ಇಲ್ಲವೇ? ಇದರ ಹಿಂದಿರುವ ಅಧಿಕಾರಿಗಳ ಮೇಲೆ ಕ್ರಮವಾದರೆ ಅಷ್ಟೇ ಸಾಲದು, ಸಮಗ್ರ ವರದಿ ಕೊಡಬೇಕು. ಇವತ್ತು ಕೇವಲ 35 ಲಕ್ಷ ಅನುದಾನ ಕೊಟ್ಟರೆ ಯಾವ ಶಾಸಕರಿಗೂ ಸಾಕಾಗುವುದಿಲ್ಲ ತೃಪ್ತಿಕರವಿಲ್ಲ, ಜೊತೆಗೆ ಎಂಎಲ್ಸಿಗಳಿಗೆ ಇಂತಹ ಅಭಿವೃದ್ಧಿ ಮಂಡಳಿಗಳಿಂದ ಅಷ್ಟೇ ಅನುದಾನ ಬರುತ್ತದೆ ಅದು ಬಿಟ್ಟು ಬೇರೆ ಕಡೆಯಿಂದ ಅನುದಾನ ಬರಲ್ಲ ಏಕೆ ಇಂತಹ ತಾರತಮ್ಯ ಎಂದು ಪ್ರಶ್ನೆ ಮಾಡಿದರು.

2023 24ನೇ ಸಾಲಿನ ಅವಧಿಗೆ 35ಲಕ್ಷಕ್ಕೆ ಕಾಮಗಾರಿಗಳನ್ನು ಸಲ್ಲಿಸಲು ಕೊರಿದ್ದು, ಈ ಹಿಂದೆ ನೀಡಿರುವ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ, ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಸರಿ ಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಬೋಸುರಾಜ್, ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಮೀರಿ ಅನುಮೋದನೆ ಇಲ್ಲದೇ ಸುಮಾರು 362 ಕೋಟಿ ಅನುದಾನದಲ್ಲಿ ಸುಮಾರು 2374 ಕಾಮಗಾರಿಗಳನ್ನು ನಡೆಸಲು ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ಯಾರು ತಪ್ಪು ಮಾಡಿದ್ದಾರೆ ಅವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಈಗಿರುವ 19 ಕೋಟಿ ಅನುದಾನದಲ್ಲಿ ಬಯಲುಸೀಮೆ ಪ್ರದೇಶದ ಶಾಸಕರಿಗೆ ತಲಾ 35 ಲಕ್ಷ ವನ್ನು ಅಧ್ಯತೆಯ ಕಾಮಗಾರಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಸದನದಲ್ಲಿ ತಿಳಿಸಿದರು.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

1 minute ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

19 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago