ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಬಯಲು ಶೌಚಾಲಯವನ್ನಾಗಿಸಿಕೊಂಡು ದಿನನಿತ್ಯ ಮೂತ್ರ ವಿಸರ್ಜನೆ ಮಾಡುತ್ತಿರುವ ಸಾರ್ವಜನಿಕರು.
ತಾಲೂಕು ಕಚೇರಿಗೆ ಪ್ರತಿದಿನ ನೂರಾರು ಮಂದಿ ಕೆಲಸ ಕಾರ್ಯಕ್ಕೆ ಬರುತ್ತಾರೆ. ಸಾರ್ವಜನಿಕರಿಗೆಂದೇ ಕಚೇರಿ ಪಕ್ಕದಲ್ಲೇ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳದ ಸಾರ್ವಜನಿಕರು ಹಾಗೂ ಸ್ಥಳೀಯರು ಕಚೇರಿ ಆವರಣದಲ್ಲಿ ಇರುವ ಅಂಗನವಾಡಿ ಕೇಂದ್ರದ ಪಕ್ಕದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡಿ ಮಲಿನಗೊಳಿಸುತ್ತಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ನಮ್ಮ ಅಂಗನವಾಡಿಯಲ್ಲಿ 17 ರಿಂದ 20 ಮಕ್ಕಳಿದ್ದು, ಮಕ್ಕಳ ಅಡುಗೆ ಮತ್ತು ಶೌಚಾಲಯಕ್ಕಾಗಿ ಪಕ್ಕದಲ್ಲೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ನೀರಿನ ಸಂಪರ್ಕವನ್ನು ಪೈಪ್ ಮುಖಾಂತರ ನಮ್ಮ ಅಂಗನವಾಡಿ ಮತ್ತು ಶಾಲಾ ಕಾಂಪೌಂಡ್ ನಡುವೆ ಹಾಕಿಸಿಕೊಳ್ಳಲಾಗಿದೆ.
ಶಾಲಾ ಆವರಣವನ್ನು ಸ್ವಚ್ಚವಾಗಿಡುವಂತೆ ಅನೇಕ ಬಾರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿದ್ದರೂ ಪೌರಾಯುಕ್ತರಾಗಲಿ ಅಥವಾ ನಗರಸಭಾ ಸಿಬ್ಬಂದಿಯಾಗಲಿ ಮನವಿಗೆ ಸ್ಪಂದಿಸಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಆರೋಪಿಸುತ್ತಿದ್ದಾರೆ.
ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಇನ್ನಾದರೂ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…