ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಬಯಲು ಶೌಚಾಲಯವನ್ನಾಗಿಸಿಕೊಂಡು ದಿನನಿತ್ಯ ಮೂತ್ರ ವಿಸರ್ಜನೆ ಮಾಡುತ್ತಿರುವ ಸಾರ್ವಜನಿಕರು.
ತಾಲೂಕು ಕಚೇರಿಗೆ ಪ್ರತಿದಿನ ನೂರಾರು ಮಂದಿ ಕೆಲಸ ಕಾರ್ಯಕ್ಕೆ ಬರುತ್ತಾರೆ. ಸಾರ್ವಜನಿಕರಿಗೆಂದೇ ಕಚೇರಿ ಪಕ್ಕದಲ್ಲೇ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳದ ಸಾರ್ವಜನಿಕರು ಹಾಗೂ ಸ್ಥಳೀಯರು ಕಚೇರಿ ಆವರಣದಲ್ಲಿ ಇರುವ ಅಂಗನವಾಡಿ ಕೇಂದ್ರದ ಪಕ್ಕದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡಿ ಮಲಿನಗೊಳಿಸುತ್ತಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ನಮ್ಮ ಅಂಗನವಾಡಿಯಲ್ಲಿ 17 ರಿಂದ 20 ಮಕ್ಕಳಿದ್ದು, ಮಕ್ಕಳ ಅಡುಗೆ ಮತ್ತು ಶೌಚಾಲಯಕ್ಕಾಗಿ ಪಕ್ಕದಲ್ಲೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ನೀರಿನ ಸಂಪರ್ಕವನ್ನು ಪೈಪ್ ಮುಖಾಂತರ ನಮ್ಮ ಅಂಗನವಾಡಿ ಮತ್ತು ಶಾಲಾ ಕಾಂಪೌಂಡ್ ನಡುವೆ ಹಾಕಿಸಿಕೊಳ್ಳಲಾಗಿದೆ.
ಶಾಲಾ ಆವರಣವನ್ನು ಸ್ವಚ್ಚವಾಗಿಡುವಂತೆ ಅನೇಕ ಬಾರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿದ್ದರೂ ಪೌರಾಯುಕ್ತರಾಗಲಿ ಅಥವಾ ನಗರಸಭಾ ಸಿಬ್ಬಂದಿಯಾಗಲಿ ಮನವಿಗೆ ಸ್ಪಂದಿಸಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಆರೋಪಿಸುತ್ತಿದ್ದಾರೆ.
ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಇನ್ನಾದರೂ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…