ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಬಯಲು ಶೌಚಾಲಯವನ್ನಾಗಿಸಿಕೊಂಡು ದಿನನಿತ್ಯ ಮೂತ್ರ ವಿಸರ್ಜನೆ ಮಾಡುತ್ತಿರುವ ಸಾರ್ವಜನಿಕರು.
ತಾಲೂಕು ಕಚೇರಿಗೆ ಪ್ರತಿದಿನ ನೂರಾರು ಮಂದಿ ಕೆಲಸ ಕಾರ್ಯಕ್ಕೆ ಬರುತ್ತಾರೆ. ಸಾರ್ವಜನಿಕರಿಗೆಂದೇ ಕಚೇರಿ ಪಕ್ಕದಲ್ಲೇ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಆದರೆ ಅದನ್ನು ಸರಿಯಾಗಿ ಬಳಸಿಕೊಳ್ಳದ ಸಾರ್ವಜನಿಕರು ಹಾಗೂ ಸ್ಥಳೀಯರು ಕಚೇರಿ ಆವರಣದಲ್ಲಿ ಇರುವ ಅಂಗನವಾಡಿ ಕೇಂದ್ರದ ಪಕ್ಕದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡಿ ಮಲಿನಗೊಳಿಸುತ್ತಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ನಮ್ಮ ಅಂಗನವಾಡಿಯಲ್ಲಿ 17 ರಿಂದ 20 ಮಕ್ಕಳಿದ್ದು, ಮಕ್ಕಳ ಅಡುಗೆ ಮತ್ತು ಶೌಚಾಲಯಕ್ಕಾಗಿ ಪಕ್ಕದಲ್ಲೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ನೀರಿನ ಸಂಪರ್ಕವನ್ನು ಪೈಪ್ ಮುಖಾಂತರ ನಮ್ಮ ಅಂಗನವಾಡಿ ಮತ್ತು ಶಾಲಾ ಕಾಂಪೌಂಡ್ ನಡುವೆ ಹಾಕಿಸಿಕೊಳ್ಳಲಾಗಿದೆ.
ಶಾಲಾ ಆವರಣವನ್ನು ಸ್ವಚ್ಚವಾಗಿಡುವಂತೆ ಅನೇಕ ಬಾರಿ ನಗರಸಭೆಗೆ ಮನವಿ ಪತ್ರ ಸಲ್ಲಿಸಿದ್ದರೂ ಪೌರಾಯುಕ್ತರಾಗಲಿ ಅಥವಾ ನಗರಸಭಾ ಸಿಬ್ಬಂದಿಯಾಗಲಿ ಮನವಿಗೆ ಸ್ಪಂದಿಸಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಆರೋಪಿಸುತ್ತಿದ್ದಾರೆ.
ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಇನ್ನಾದರೂ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…