ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.
ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ 8 ಸಾವಿರ ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ ನೀರನ್ನು ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.
2022ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…