ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಪತ್ತೆ: ಅನಾರೋಗ್ಯ ಭೀತಿಯಲ್ಲಿ ಜನ- ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ

ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.

ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ  ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ  8 ಸಾವಿರ  ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ  ನೀರನ್ನು  ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.

2022ರಲ್ಲಿ  ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ  ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

9 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

11 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago