ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಪತ್ತೆ: ಅನಾರೋಗ್ಯ ಭೀತಿಯಲ್ಲಿ ಜನ- ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ

ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.

ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ  ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ  8 ಸಾವಿರ  ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ  ನೀರನ್ನು  ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.

2022ರಲ್ಲಿ  ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ  ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

4 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

5 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

6 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

7 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

9 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

9 hours ago