ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಪತ್ತೆ: ಅನಾರೋಗ್ಯ ಭೀತಿಯಲ್ಲಿ ಜನ- ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ

ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.

ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ  ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ  8 ಸಾವಿರ  ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ  ನೀರನ್ನು  ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.

2022ರಲ್ಲಿ  ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ  ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago