ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.
ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ 8 ಸಾವಿರ ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ ನೀರನ್ನು ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.
2022ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…