ಬಯಲು ಸೀಮೆಯ ಜನರು ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಕಂಡು ಬಂದಿದೆ. ಈ ನೀರಿನ್ನು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿ ಮತ್ತು ಮೆದುಳಿನ ಸಂಬಂದಿಸಿದ ಕಾಯಿಲೆಗಳು ಹರಡುತ್ತವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಹೇಳಿದರು.
ನಗರ ಕನ್ನಡ ಜಾಗೃತ ಭವನದಲ್ಲಿ ಆಯೋಜಿಸಿದ್ದ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಜಾರಿಗೆ ತರಲು ಸುಮಾರು 30ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಇಲ್ಲಿಯವರೆಗೆ ಒಂದು ಹನಿ ನೀರು ತರಲು ಸಾಧ್ಯವಾಗದೇ ಅಧಿಕಾರಕ್ಕೆ ಸರ್ಕಾರಗಳು ಬಂದಿವೆ. ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲಾಗುವುದು ಎಂದು ಹಲವಾರು ವರ್ಷಗಳಿಂದ ಸರ್ಕಾರಗಳು ರೈತರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ಅಧಿಕಾರ ಹಿಡಿದಿವೆ. ಆದರೆ ಇಲ್ಲಿಯವರೆಗೆ 8 ಸಾವಿರ ಕೋಟಿಯಿಂದ 10 ಸಾವಿರದ ಈಗ 15 ರಿಂದ 20 ಸಾವಿರ ಕೋಟಿಯವರೆಗೂ ಖರ್ಚು ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಈ ಬಾಗದ ರೈತರಿಗೆ ಶುದ್ಧ ಕುಡಿಯುವ ನೀರನ್ನು ಸಹ ಕೊಡಲಾಗದೆ ವಂಚಿಸಿದ್ದಾರೆ. ಬೆಂಗಳೂರು ನಗರದ ತ್ಯಾಜ್ಯ ನೀರನ್ನ ಎರಡು ಹಂತದಲ್ಲಿ ಸಂಸ್ಕರಣೆ ಮಾಡಿ ಕೆರೆಗಳಿಗೆ ತುಂಬಿಸಿ ಭಾಗಶಃ ಕೆರೆಗಳನ್ನು ನಾಶ ಮಾಡಿದ್ದು ಹಾಗೂ ಕೆರೆಗಳ ನೀರನ್ನು ಬೆಳೆಗೆ ಹರಿಸುವುದರಿಂದ ಬೆಳೆಗಳು ಸಹ ವಿಷಯುಕ್ತ ನೀರಿನಿಂದ ಬೆಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಅಲ್ಪಪ್ರಮಾಣದ ಬೆಳೆಗಳಿಂದ ಆರೋಗ್ಯ ಹಾನಿಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೆರೆಗಳ ಪಕ್ಕದಲ್ಲಿ ಕೊರೆದಂತಹ ಕೊಳವೆ ಬಾವಿಗಳಿಂದ ಗೃಹ ಬಳಕೆಗೆ ಸರಬರಾಜು ಮಾಡಿದ ನೀರು ಕುಡಿಯುವುದರಿಂದ ಮನುಷ್ಯ ಹಾಗೂ ಜಾನುವಾರುಗಳ ಮೇಲೆ ಅಪಾಯಕಾರಿ ದುಷ್ಪರಿಣಾಮ ಬೀರುವಂತಹದು ಕಂಡುಬಂದಿದೆ ಎಂದು ಹೇಳಿದರು.
2022ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಚಿಕ್ಕಬಳ್ಳಾಪುರ ಕೋಲಾರದ ಭಾಗದಲ್ಲಿ ಕೊಳವೆ ಬಾವಿಯ ನೀರನ್ನು ಪರೀಕ್ಷೆ ಮಾಡಿದಂತಹ ಸಂದರ್ಭದಲ್ಲಿ ನೀರಿನಲ್ಲಿ ಯುರೇನಿಯಂ ಅಂಶ ಕಂಡುಬಂದಿರುವುದನ್ನ ಖಾತರಿಪಡಿಸಿದೆ, ಇದು ಆಘಾತಕಾರಿ ಸಂಗತಿಯಾಗಿದೆ. ಈ ನೀರು ಕುಡಿಯುವುದರಿಂದ ಕ್ಯಾನ್ಸರ್, ಕಿಡ್ನಿಯ ಮತ್ತು ಮೆದುಳಿಗೆ ಸಂಬಂಧಿಸಿದಂತಹ ಕಾಯಿಲೆಗಳಿಗೆ ಜನರು ತುತ್ತಾಗುವುದು ಕಂಡುಬಂದಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವ್ ನಾಯಕ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಹನುಮೇಗೌಡ, ಶಿರವಾರ ರವಿ ರೈತಹೋರಾಟಗಾರ ಸತೀಶ್ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…