ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ ಮಾರ್ಗಸೂಚಿ

ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ.

ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ ಬೀರುವುದರಿಂದ ಬರದ ನಿರ್ವಹಣೆ ಅತಿ ಮುಖ್ಯದ್ದಾಗಿದೆ.

ಒಣಹವೆ ಮತ್ತು ಮೇವಿನ ಕೊರತೆಯಿಂದಾಗಿ  ಜಾನುವಾರುಗಳ ಹಾಲು, ಮಾಂಸ, ಮೊಟ್ಟೆ ಮತ್ತು ಉಣ್ಣೆ ಉತ್ಪಾದನೆಯಲ್ಲಿ ಕುಂಠಿತವಾಗುವುದು. ಕಲುಷಿತ ನೀರು, ಪೋಷಕಾಂಶಗಳ ಕೊರತೆಯಿಂದ ರೋಗನಿರೋಧಕ ಶಕ್ತಿ ಕುಂದುವುದರೊಂದಿಗೆ ರೋಗಗಳ ಉಲ್ಬಣದಿಂದಾಗಿ ಜಾನುವಾರುಗಳ ಸಾವು ಸಂಭವಿಸಬಹುದು.

ಅಸಂಪ್ರದಾಯಕ ಮೇವಿನ ಸೇವನೆಯಿಂದ Nitrate, Cyanide (Prussic acid) ವಿಷಭಾದೆಯಿಂದ ಸಾವು ಸಂಭವಿಸುತ್ತದೆ. ಗರ್ಭಧರಿಸಿದ ಜಾನುವಾರುಗಳಲ್ಲಿ ಗರ್ಭಪಾತದೊಂದಿಗೆ ಸಂತಾನೋತ್ಪತ್ತಿ ಕುಂಠಿತವಾಗುತ್ತದೆ. ಈ ಕಾರಣಗಳಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ರೈತರ ಆಹಾರ ಮತ್ತು ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ.

*ಬರ ನಿರ್ವಹಣೆಯಲ್ಲಿ ಪ್ರಮುಖವಾಗಿ ಕೈಗೊಳ್ಳಬೇಕಾದ ಕ್ರಮಗಳು*

ಲಭ್ಯವಿರುವ ಹಸಿರು ಮೇವನ್ನು ಒಣಗಿಸಿ ಹುಲ್ಲನ್ನು (Hay) ಮತ್ತು ರಸಮೇವಿನ (Sailage) ರೂಪದಲ್ಲಿ ಸಂಗ್ರಹಿಸಬೇಕು. ಮೇವು ಕತ್ತರಿಸುವ ಯಂತ್ರವನ್ನು ಉಪಯೋಗಿಸಿ ಮೇವು ಪೋಲಾಗದಂತೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳನ್ನು ಸುಡದೇ ಸಂಗ್ರಹಿಸಿ ಮೇವಾಗಿ ಬಳಸುವುದು.

ಭತ್ತ, ರಾಗಿ  ಕೊಯ್ಲು ಸಂದರ್ಭದಲ್ಲಿ ಬುಡಕ್ಕೆ ಹತ್ತಿರ ಕಟಾವು ಮಾಡಿ ಹುಲ್ಲನ್ನು ಸಂಗ್ರಹಿಸುವುದು. ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು. ಹೆಚ್ಚು ತಾಪಮಾನವಿರುವ ಸಮಯದಲ್ಲಿ ನೀರನ್ನು ಜಾನುವಾರುಗಳ ಮೇಲೆ ಸಿಂಪಡಿಸುವುದು.

ಎಳೆಯ (ಬಲಿಯದ) ಹಸಿಮೇವನ್ನು ನೀಡುವುದರಿಂದ  ವಿಷಬಾಧೆಯಾಗುವುದನ್ನು ತಪ್ಪಿಸಲು 5-6 ದಿನಗಳ ಕಾಲ ಚೆನ್ನಾಗಿ ಒಣಗಿಸಿ ನೀಡುವುದು ಮತ್ತು ಸಂಗ್ರಹಿಸುವುದು. ಅಸಂಪ್ರದಾಯಕ ಮೇವುಗಳಿಂದಾಗಬಹುದಾದ ವಿಷಬಾಧೆಯನ್ನು ತಪ್ಪಿಸಲು ಸ್ಥಳೀಯ ಪಶುವೈದ್ಯರ ಸಲಹೆಯ ಮೇರೆಗೆ 6 ಸಾಂಪ್ರದಾಯಕ ಮೇವುಗಳನ್ನು ಬಳಸುವುದು.

ವಯಸ್ಕ ಹಸು ಮತ್ತು ಎಮ್ಮೆಗಳಿಗೆ 6 ಕೆ.ಜಿ ಒಣಮೇವು (20-30 ಲೀ ನೀರು), ಕುರಿ ಮತ್ತು ಮೇಕೆಗಳಿಗೆ 0.5 ಕೆ.ಜಿ. ಮೇವಿನ (3-5 ಲೀ. ನೀರು) ಸಂಪೂರ್ಣ ಆಹಾರ ನೀಡುವುದು. ಜಾನುವಾರುಗಳಿಗೆ ಆಹಾರ ನೀಡುವ ಪದ್ಧತಿಗಳಲ್ಲಿ ಸುಧಾರಿತ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು.

ಹುಲ್ಲು ಮತ್ತು ರಸಮೇವಿನ ರೂಪದಲ್ಲಿ ಮೇವು ಸಂಗ್ರಹಣೆ. ಒಣ ಮೇವಿನ ಯೂರಿಯ ಪೌಷ್ಟಿಕರಣೆ. Urea Mollasess mineral black licker  ಉಪಯೋಗಿಸುವುದು. TMR Blocks ಬಳಕೆ ಮಾಡುವುದು. Azolla & Hydrophonic ಬೆಳೆಯುವುದನ್ನು ರೂಢಿಸಿಕೊಳ್ಳುವುದು. Silvi-pasture & Horti-pasture ಅಳವಡಿಕೆ. ನೀರಾವರಿ ಇರುವ ಪ್ರದೇಶಗಳಲ್ಲಿ ಮೇವಿನ ಬೆಳೆಗಳ ಉತ್ಪಾದನೆ ಮಾಡಬೇಕು.

(ಪ್ರಕಟಣೆ: ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

5 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

5 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

13 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago