ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ ಮಾರ್ಗಸೂಚಿ

ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ.

ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ ಬೀರುವುದರಿಂದ ಬರದ ನಿರ್ವಹಣೆ ಅತಿ ಮುಖ್ಯದ್ದಾಗಿದೆ.

ಒಣಹವೆ ಮತ್ತು ಮೇವಿನ ಕೊರತೆಯಿಂದಾಗಿ  ಜಾನುವಾರುಗಳ ಹಾಲು, ಮಾಂಸ, ಮೊಟ್ಟೆ ಮತ್ತು ಉಣ್ಣೆ ಉತ್ಪಾದನೆಯಲ್ಲಿ ಕುಂಠಿತವಾಗುವುದು. ಕಲುಷಿತ ನೀರು, ಪೋಷಕಾಂಶಗಳ ಕೊರತೆಯಿಂದ ರೋಗನಿರೋಧಕ ಶಕ್ತಿ ಕುಂದುವುದರೊಂದಿಗೆ ರೋಗಗಳ ಉಲ್ಬಣದಿಂದಾಗಿ ಜಾನುವಾರುಗಳ ಸಾವು ಸಂಭವಿಸಬಹುದು.

ಅಸಂಪ್ರದಾಯಕ ಮೇವಿನ ಸೇವನೆಯಿಂದ Nitrate, Cyanide (Prussic acid) ವಿಷಭಾದೆಯಿಂದ ಸಾವು ಸಂಭವಿಸುತ್ತದೆ. ಗರ್ಭಧರಿಸಿದ ಜಾನುವಾರುಗಳಲ್ಲಿ ಗರ್ಭಪಾತದೊಂದಿಗೆ ಸಂತಾನೋತ್ಪತ್ತಿ ಕುಂಠಿತವಾಗುತ್ತದೆ. ಈ ಕಾರಣಗಳಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ರೈತರ ಆಹಾರ ಮತ್ತು ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ.

*ಬರ ನಿರ್ವಹಣೆಯಲ್ಲಿ ಪ್ರಮುಖವಾಗಿ ಕೈಗೊಳ್ಳಬೇಕಾದ ಕ್ರಮಗಳು*

ಲಭ್ಯವಿರುವ ಹಸಿರು ಮೇವನ್ನು ಒಣಗಿಸಿ ಹುಲ್ಲನ್ನು (Hay) ಮತ್ತು ರಸಮೇವಿನ (Sailage) ರೂಪದಲ್ಲಿ ಸಂಗ್ರಹಿಸಬೇಕು. ಮೇವು ಕತ್ತರಿಸುವ ಯಂತ್ರವನ್ನು ಉಪಯೋಗಿಸಿ ಮೇವು ಪೋಲಾಗದಂತೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳನ್ನು ಸುಡದೇ ಸಂಗ್ರಹಿಸಿ ಮೇವಾಗಿ ಬಳಸುವುದು.

ಭತ್ತ, ರಾಗಿ  ಕೊಯ್ಲು ಸಂದರ್ಭದಲ್ಲಿ ಬುಡಕ್ಕೆ ಹತ್ತಿರ ಕಟಾವು ಮಾಡಿ ಹುಲ್ಲನ್ನು ಸಂಗ್ರಹಿಸುವುದು. ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು. ಹೆಚ್ಚು ತಾಪಮಾನವಿರುವ ಸಮಯದಲ್ಲಿ ನೀರನ್ನು ಜಾನುವಾರುಗಳ ಮೇಲೆ ಸಿಂಪಡಿಸುವುದು.

ಎಳೆಯ (ಬಲಿಯದ) ಹಸಿಮೇವನ್ನು ನೀಡುವುದರಿಂದ  ವಿಷಬಾಧೆಯಾಗುವುದನ್ನು ತಪ್ಪಿಸಲು 5-6 ದಿನಗಳ ಕಾಲ ಚೆನ್ನಾಗಿ ಒಣಗಿಸಿ ನೀಡುವುದು ಮತ್ತು ಸಂಗ್ರಹಿಸುವುದು. ಅಸಂಪ್ರದಾಯಕ ಮೇವುಗಳಿಂದಾಗಬಹುದಾದ ವಿಷಬಾಧೆಯನ್ನು ತಪ್ಪಿಸಲು ಸ್ಥಳೀಯ ಪಶುವೈದ್ಯರ ಸಲಹೆಯ ಮೇರೆಗೆ 6 ಸಾಂಪ್ರದಾಯಕ ಮೇವುಗಳನ್ನು ಬಳಸುವುದು.

ವಯಸ್ಕ ಹಸು ಮತ್ತು ಎಮ್ಮೆಗಳಿಗೆ 6 ಕೆ.ಜಿ ಒಣಮೇವು (20-30 ಲೀ ನೀರು), ಕುರಿ ಮತ್ತು ಮೇಕೆಗಳಿಗೆ 0.5 ಕೆ.ಜಿ. ಮೇವಿನ (3-5 ಲೀ. ನೀರು) ಸಂಪೂರ್ಣ ಆಹಾರ ನೀಡುವುದು. ಜಾನುವಾರುಗಳಿಗೆ ಆಹಾರ ನೀಡುವ ಪದ್ಧತಿಗಳಲ್ಲಿ ಸುಧಾರಿತ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು.

ಹುಲ್ಲು ಮತ್ತು ರಸಮೇವಿನ ರೂಪದಲ್ಲಿ ಮೇವು ಸಂಗ್ರಹಣೆ. ಒಣ ಮೇವಿನ ಯೂರಿಯ ಪೌಷ್ಟಿಕರಣೆ. Urea Mollasess mineral black licker  ಉಪಯೋಗಿಸುವುದು. TMR Blocks ಬಳಕೆ ಮಾಡುವುದು. Azolla & Hydrophonic ಬೆಳೆಯುವುದನ್ನು ರೂಢಿಸಿಕೊಳ್ಳುವುದು. Silvi-pasture & Horti-pasture ಅಳವಡಿಕೆ. ನೀರಾವರಿ ಇರುವ ಪ್ರದೇಶಗಳಲ್ಲಿ ಮೇವಿನ ಬೆಳೆಗಳ ಉತ್ಪಾದನೆ ಮಾಡಬೇಕು.

(ಪ್ರಕಟಣೆ: ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

2 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

3 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

18 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago