ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ ಮಾರ್ಗಸೂಚಿ

ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ.

ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ ಬೀರುವುದರಿಂದ ಬರದ ನಿರ್ವಹಣೆ ಅತಿ ಮುಖ್ಯದ್ದಾಗಿದೆ.

ಒಣಹವೆ ಮತ್ತು ಮೇವಿನ ಕೊರತೆಯಿಂದಾಗಿ  ಜಾನುವಾರುಗಳ ಹಾಲು, ಮಾಂಸ, ಮೊಟ್ಟೆ ಮತ್ತು ಉಣ್ಣೆ ಉತ್ಪಾದನೆಯಲ್ಲಿ ಕುಂಠಿತವಾಗುವುದು. ಕಲುಷಿತ ನೀರು, ಪೋಷಕಾಂಶಗಳ ಕೊರತೆಯಿಂದ ರೋಗನಿರೋಧಕ ಶಕ್ತಿ ಕುಂದುವುದರೊಂದಿಗೆ ರೋಗಗಳ ಉಲ್ಬಣದಿಂದಾಗಿ ಜಾನುವಾರುಗಳ ಸಾವು ಸಂಭವಿಸಬಹುದು.

ಅಸಂಪ್ರದಾಯಕ ಮೇವಿನ ಸೇವನೆಯಿಂದ Nitrate, Cyanide (Prussic acid) ವಿಷಭಾದೆಯಿಂದ ಸಾವು ಸಂಭವಿಸುತ್ತದೆ. ಗರ್ಭಧರಿಸಿದ ಜಾನುವಾರುಗಳಲ್ಲಿ ಗರ್ಭಪಾತದೊಂದಿಗೆ ಸಂತಾನೋತ್ಪತ್ತಿ ಕುಂಠಿತವಾಗುತ್ತದೆ. ಈ ಕಾರಣಗಳಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ರೈತರ ಆಹಾರ ಮತ್ತು ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ.

*ಬರ ನಿರ್ವಹಣೆಯಲ್ಲಿ ಪ್ರಮುಖವಾಗಿ ಕೈಗೊಳ್ಳಬೇಕಾದ ಕ್ರಮಗಳು*

ಲಭ್ಯವಿರುವ ಹಸಿರು ಮೇವನ್ನು ಒಣಗಿಸಿ ಹುಲ್ಲನ್ನು (Hay) ಮತ್ತು ರಸಮೇವಿನ (Sailage) ರೂಪದಲ್ಲಿ ಸಂಗ್ರಹಿಸಬೇಕು. ಮೇವು ಕತ್ತರಿಸುವ ಯಂತ್ರವನ್ನು ಉಪಯೋಗಿಸಿ ಮೇವು ಪೋಲಾಗದಂತೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳನ್ನು ಸುಡದೇ ಸಂಗ್ರಹಿಸಿ ಮೇವಾಗಿ ಬಳಸುವುದು.

ಭತ್ತ, ರಾಗಿ  ಕೊಯ್ಲು ಸಂದರ್ಭದಲ್ಲಿ ಬುಡಕ್ಕೆ ಹತ್ತಿರ ಕಟಾವು ಮಾಡಿ ಹುಲ್ಲನ್ನು ಸಂಗ್ರಹಿಸುವುದು. ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು. ಹೆಚ್ಚು ತಾಪಮಾನವಿರುವ ಸಮಯದಲ್ಲಿ ನೀರನ್ನು ಜಾನುವಾರುಗಳ ಮೇಲೆ ಸಿಂಪಡಿಸುವುದು.

ಎಳೆಯ (ಬಲಿಯದ) ಹಸಿಮೇವನ್ನು ನೀಡುವುದರಿಂದ  ವಿಷಬಾಧೆಯಾಗುವುದನ್ನು ತಪ್ಪಿಸಲು 5-6 ದಿನಗಳ ಕಾಲ ಚೆನ್ನಾಗಿ ಒಣಗಿಸಿ ನೀಡುವುದು ಮತ್ತು ಸಂಗ್ರಹಿಸುವುದು. ಅಸಂಪ್ರದಾಯಕ ಮೇವುಗಳಿಂದಾಗಬಹುದಾದ ವಿಷಬಾಧೆಯನ್ನು ತಪ್ಪಿಸಲು ಸ್ಥಳೀಯ ಪಶುವೈದ್ಯರ ಸಲಹೆಯ ಮೇರೆಗೆ 6 ಸಾಂಪ್ರದಾಯಕ ಮೇವುಗಳನ್ನು ಬಳಸುವುದು.

ವಯಸ್ಕ ಹಸು ಮತ್ತು ಎಮ್ಮೆಗಳಿಗೆ 6 ಕೆ.ಜಿ ಒಣಮೇವು (20-30 ಲೀ ನೀರು), ಕುರಿ ಮತ್ತು ಮೇಕೆಗಳಿಗೆ 0.5 ಕೆ.ಜಿ. ಮೇವಿನ (3-5 ಲೀ. ನೀರು) ಸಂಪೂರ್ಣ ಆಹಾರ ನೀಡುವುದು. ಜಾನುವಾರುಗಳಿಗೆ ಆಹಾರ ನೀಡುವ ಪದ್ಧತಿಗಳಲ್ಲಿ ಸುಧಾರಿತ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು.

ಹುಲ್ಲು ಮತ್ತು ರಸಮೇವಿನ ರೂಪದಲ್ಲಿ ಮೇವು ಸಂಗ್ರಹಣೆ. ಒಣ ಮೇವಿನ ಯೂರಿಯ ಪೌಷ್ಟಿಕರಣೆ. Urea Mollasess mineral black licker  ಉಪಯೋಗಿಸುವುದು. TMR Blocks ಬಳಕೆ ಮಾಡುವುದು. Azolla & Hydrophonic ಬೆಳೆಯುವುದನ್ನು ರೂಢಿಸಿಕೊಳ್ಳುವುದು. Silvi-pasture & Horti-pasture ಅಳವಡಿಕೆ. ನೀರಾವರಿ ಇರುವ ಪ್ರದೇಶಗಳಲ್ಲಿ ಮೇವಿನ ಬೆಳೆಗಳ ಉತ್ಪಾದನೆ ಮಾಡಬೇಕು.

(ಪ್ರಕಟಣೆ: ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

47 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

52 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

8 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

8 hours ago