ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ ಮಾರ್ಗಸೂಚಿ

ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ.

ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ ಬೀರುವುದರಿಂದ ಬರದ ನಿರ್ವಹಣೆ ಅತಿ ಮುಖ್ಯದ್ದಾಗಿದೆ.

ಒಣಹವೆ ಮತ್ತು ಮೇವಿನ ಕೊರತೆಯಿಂದಾಗಿ  ಜಾನುವಾರುಗಳ ಹಾಲು, ಮಾಂಸ, ಮೊಟ್ಟೆ ಮತ್ತು ಉಣ್ಣೆ ಉತ್ಪಾದನೆಯಲ್ಲಿ ಕುಂಠಿತವಾಗುವುದು. ಕಲುಷಿತ ನೀರು, ಪೋಷಕಾಂಶಗಳ ಕೊರತೆಯಿಂದ ರೋಗನಿರೋಧಕ ಶಕ್ತಿ ಕುಂದುವುದರೊಂದಿಗೆ ರೋಗಗಳ ಉಲ್ಬಣದಿಂದಾಗಿ ಜಾನುವಾರುಗಳ ಸಾವು ಸಂಭವಿಸಬಹುದು.

ಅಸಂಪ್ರದಾಯಕ ಮೇವಿನ ಸೇವನೆಯಿಂದ Nitrate, Cyanide (Prussic acid) ವಿಷಭಾದೆಯಿಂದ ಸಾವು ಸಂಭವಿಸುತ್ತದೆ. ಗರ್ಭಧರಿಸಿದ ಜಾನುವಾರುಗಳಲ್ಲಿ ಗರ್ಭಪಾತದೊಂದಿಗೆ ಸಂತಾನೋತ್ಪತ್ತಿ ಕುಂಠಿತವಾಗುತ್ತದೆ. ಈ ಕಾರಣಗಳಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ರೈತರ ಆಹಾರ ಮತ್ತು ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ.

*ಬರ ನಿರ್ವಹಣೆಯಲ್ಲಿ ಪ್ರಮುಖವಾಗಿ ಕೈಗೊಳ್ಳಬೇಕಾದ ಕ್ರಮಗಳು*

ಲಭ್ಯವಿರುವ ಹಸಿರು ಮೇವನ್ನು ಒಣಗಿಸಿ ಹುಲ್ಲನ್ನು (Hay) ಮತ್ತು ರಸಮೇವಿನ (Sailage) ರೂಪದಲ್ಲಿ ಸಂಗ್ರಹಿಸಬೇಕು. ಮೇವು ಕತ್ತರಿಸುವ ಯಂತ್ರವನ್ನು ಉಪಯೋಗಿಸಿ ಮೇವು ಪೋಲಾಗದಂತೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳನ್ನು ಸುಡದೇ ಸಂಗ್ರಹಿಸಿ ಮೇವಾಗಿ ಬಳಸುವುದು.

ಭತ್ತ, ರಾಗಿ  ಕೊಯ್ಲು ಸಂದರ್ಭದಲ್ಲಿ ಬುಡಕ್ಕೆ ಹತ್ತಿರ ಕಟಾವು ಮಾಡಿ ಹುಲ್ಲನ್ನು ಸಂಗ್ರಹಿಸುವುದು. ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು. ಹೆಚ್ಚು ತಾಪಮಾನವಿರುವ ಸಮಯದಲ್ಲಿ ನೀರನ್ನು ಜಾನುವಾರುಗಳ ಮೇಲೆ ಸಿಂಪಡಿಸುವುದು.

ಎಳೆಯ (ಬಲಿಯದ) ಹಸಿಮೇವನ್ನು ನೀಡುವುದರಿಂದ  ವಿಷಬಾಧೆಯಾಗುವುದನ್ನು ತಪ್ಪಿಸಲು 5-6 ದಿನಗಳ ಕಾಲ ಚೆನ್ನಾಗಿ ಒಣಗಿಸಿ ನೀಡುವುದು ಮತ್ತು ಸಂಗ್ರಹಿಸುವುದು. ಅಸಂಪ್ರದಾಯಕ ಮೇವುಗಳಿಂದಾಗಬಹುದಾದ ವಿಷಬಾಧೆಯನ್ನು ತಪ್ಪಿಸಲು ಸ್ಥಳೀಯ ಪಶುವೈದ್ಯರ ಸಲಹೆಯ ಮೇರೆಗೆ 6 ಸಾಂಪ್ರದಾಯಕ ಮೇವುಗಳನ್ನು ಬಳಸುವುದು.

ವಯಸ್ಕ ಹಸು ಮತ್ತು ಎಮ್ಮೆಗಳಿಗೆ 6 ಕೆ.ಜಿ ಒಣಮೇವು (20-30 ಲೀ ನೀರು), ಕುರಿ ಮತ್ತು ಮೇಕೆಗಳಿಗೆ 0.5 ಕೆ.ಜಿ. ಮೇವಿನ (3-5 ಲೀ. ನೀರು) ಸಂಪೂರ್ಣ ಆಹಾರ ನೀಡುವುದು. ಜಾನುವಾರುಗಳಿಗೆ ಆಹಾರ ನೀಡುವ ಪದ್ಧತಿಗಳಲ್ಲಿ ಸುಧಾರಿತ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು.

ಹುಲ್ಲು ಮತ್ತು ರಸಮೇವಿನ ರೂಪದಲ್ಲಿ ಮೇವು ಸಂಗ್ರಹಣೆ. ಒಣ ಮೇವಿನ ಯೂರಿಯ ಪೌಷ್ಟಿಕರಣೆ. Urea Mollasess mineral black licker  ಉಪಯೋಗಿಸುವುದು. TMR Blocks ಬಳಕೆ ಮಾಡುವುದು. Azolla & Hydrophonic ಬೆಳೆಯುವುದನ್ನು ರೂಢಿಸಿಕೊಳ್ಳುವುದು. Silvi-pasture & Horti-pasture ಅಳವಡಿಕೆ. ನೀರಾವರಿ ಇರುವ ಪ್ರದೇಶಗಳಲ್ಲಿ ಮೇವಿನ ಬೆಳೆಗಳ ಉತ್ಪಾದನೆ ಮಾಡಬೇಕು.

(ಪ್ರಕಟಣೆ: ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

9 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

13 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

14 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago