ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ ಮಾರ್ಗಸೂಚಿ

ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ.

ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ ಬೀರುವುದರಿಂದ ಬರದ ನಿರ್ವಹಣೆ ಅತಿ ಮುಖ್ಯದ್ದಾಗಿದೆ.

ಒಣಹವೆ ಮತ್ತು ಮೇವಿನ ಕೊರತೆಯಿಂದಾಗಿ  ಜಾನುವಾರುಗಳ ಹಾಲು, ಮಾಂಸ, ಮೊಟ್ಟೆ ಮತ್ತು ಉಣ್ಣೆ ಉತ್ಪಾದನೆಯಲ್ಲಿ ಕುಂಠಿತವಾಗುವುದು. ಕಲುಷಿತ ನೀರು, ಪೋಷಕಾಂಶಗಳ ಕೊರತೆಯಿಂದ ರೋಗನಿರೋಧಕ ಶಕ್ತಿ ಕುಂದುವುದರೊಂದಿಗೆ ರೋಗಗಳ ಉಲ್ಬಣದಿಂದಾಗಿ ಜಾನುವಾರುಗಳ ಸಾವು ಸಂಭವಿಸಬಹುದು.

ಅಸಂಪ್ರದಾಯಕ ಮೇವಿನ ಸೇವನೆಯಿಂದ Nitrate, Cyanide (Prussic acid) ವಿಷಭಾದೆಯಿಂದ ಸಾವು ಸಂಭವಿಸುತ್ತದೆ. ಗರ್ಭಧರಿಸಿದ ಜಾನುವಾರುಗಳಲ್ಲಿ ಗರ್ಭಪಾತದೊಂದಿಗೆ ಸಂತಾನೋತ್ಪತ್ತಿ ಕುಂಠಿತವಾಗುತ್ತದೆ. ಈ ಕಾರಣಗಳಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ರೈತರ ಆಹಾರ ಮತ್ತು ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ.

*ಬರ ನಿರ್ವಹಣೆಯಲ್ಲಿ ಪ್ರಮುಖವಾಗಿ ಕೈಗೊಳ್ಳಬೇಕಾದ ಕ್ರಮಗಳು*

ಲಭ್ಯವಿರುವ ಹಸಿರು ಮೇವನ್ನು ಒಣಗಿಸಿ ಹುಲ್ಲನ್ನು (Hay) ಮತ್ತು ರಸಮೇವಿನ (Sailage) ರೂಪದಲ್ಲಿ ಸಂಗ್ರಹಿಸಬೇಕು. ಮೇವು ಕತ್ತರಿಸುವ ಯಂತ್ರವನ್ನು ಉಪಯೋಗಿಸಿ ಮೇವು ಪೋಲಾಗದಂತೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳನ್ನು ಸುಡದೇ ಸಂಗ್ರಹಿಸಿ ಮೇವಾಗಿ ಬಳಸುವುದು.

ಭತ್ತ, ರಾಗಿ  ಕೊಯ್ಲು ಸಂದರ್ಭದಲ್ಲಿ ಬುಡಕ್ಕೆ ಹತ್ತಿರ ಕಟಾವು ಮಾಡಿ ಹುಲ್ಲನ್ನು ಸಂಗ್ರಹಿಸುವುದು. ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು. ಹೆಚ್ಚು ತಾಪಮಾನವಿರುವ ಸಮಯದಲ್ಲಿ ನೀರನ್ನು ಜಾನುವಾರುಗಳ ಮೇಲೆ ಸಿಂಪಡಿಸುವುದು.

ಎಳೆಯ (ಬಲಿಯದ) ಹಸಿಮೇವನ್ನು ನೀಡುವುದರಿಂದ  ವಿಷಬಾಧೆಯಾಗುವುದನ್ನು ತಪ್ಪಿಸಲು 5-6 ದಿನಗಳ ಕಾಲ ಚೆನ್ನಾಗಿ ಒಣಗಿಸಿ ನೀಡುವುದು ಮತ್ತು ಸಂಗ್ರಹಿಸುವುದು. ಅಸಂಪ್ರದಾಯಕ ಮೇವುಗಳಿಂದಾಗಬಹುದಾದ ವಿಷಬಾಧೆಯನ್ನು ತಪ್ಪಿಸಲು ಸ್ಥಳೀಯ ಪಶುವೈದ್ಯರ ಸಲಹೆಯ ಮೇರೆಗೆ 6 ಸಾಂಪ್ರದಾಯಕ ಮೇವುಗಳನ್ನು ಬಳಸುವುದು.

ವಯಸ್ಕ ಹಸು ಮತ್ತು ಎಮ್ಮೆಗಳಿಗೆ 6 ಕೆ.ಜಿ ಒಣಮೇವು (20-30 ಲೀ ನೀರು), ಕುರಿ ಮತ್ತು ಮೇಕೆಗಳಿಗೆ 0.5 ಕೆ.ಜಿ. ಮೇವಿನ (3-5 ಲೀ. ನೀರು) ಸಂಪೂರ್ಣ ಆಹಾರ ನೀಡುವುದು. ಜಾನುವಾರುಗಳಿಗೆ ಆಹಾರ ನೀಡುವ ಪದ್ಧತಿಗಳಲ್ಲಿ ಸುಧಾರಿತ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು.

ಹುಲ್ಲು ಮತ್ತು ರಸಮೇವಿನ ರೂಪದಲ್ಲಿ ಮೇವು ಸಂಗ್ರಹಣೆ. ಒಣ ಮೇವಿನ ಯೂರಿಯ ಪೌಷ್ಟಿಕರಣೆ. Urea Mollasess mineral black licker  ಉಪಯೋಗಿಸುವುದು. TMR Blocks ಬಳಕೆ ಮಾಡುವುದು. Azolla & Hydrophonic ಬೆಳೆಯುವುದನ್ನು ರೂಢಿಸಿಕೊಳ್ಳುವುದು. Silvi-pasture & Horti-pasture ಅಳವಡಿಕೆ. ನೀರಾವರಿ ಇರುವ ಪ್ರದೇಶಗಳಲ್ಲಿ ಮೇವಿನ ಬೆಳೆಗಳ ಉತ್ಪಾದನೆ ಮಾಡಬೇಕು.

(ಪ್ರಕಟಣೆ: ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

22 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago