ಬರಗಾಲದ ಸಂದರ್ಭದಲ್ಲಿ ಜಾನುವಾರುಗಳ ನಿರ್ವಹಣೆ ಮಾರ್ಗಸೂಚಿ

ಬರಗಾಲವು ಸಾಮಾನ್ಯವಾಗಿ ಉತ್ಪಾದನೆಯ ಚಕ್ರದಲ್ಲಿ ಒಣಹವೆಯ ವಾತಾವರಣವಾಗಿದ್ದು, ಮಳೆಯ ಪ್ರಮಾಣ ವಾರ್ಷಿಕ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಕಾಳು ಕಟ್ಟುವ ಸಂದರ್ಭದಲ್ಲಿ ಮಣ್ಣಿನ ತೇವಾಂಶ ಕಡಿಮೆ ಇರುವುದರಿಂದ ಮತ್ತು ಕೆರೆ-ಕುಂಟೆಗಳಲ್ಲಿ ನೀರು, ಹರಿಯುವ ನೀರು, ಅಂತರ್ಜಲದ ನೀರಿನ ಮಟ್ಟ ಕಡಿಮೆಯಾಗುವುದರಿಂದ ಸಂಭವಿಸಬಹುದಾಗಿದೆ.

ಇದು ಜಾನುವಾರು ಮತ್ತು ಜನರ ಆಹಾರ ಭದ್ರತೆಯ ಮೇಲೆ ಹಾಗೂ ರೈತರ ಆರ್ಥಿಕ ಮೂಲದ ಮೇಲೆ ನೇರ ಪರಿಣಾಮ ಬೀರುವುದರಿಂದ ಬರದ ನಿರ್ವಹಣೆ ಅತಿ ಮುಖ್ಯದ್ದಾಗಿದೆ.

ಒಣಹವೆ ಮತ್ತು ಮೇವಿನ ಕೊರತೆಯಿಂದಾಗಿ  ಜಾನುವಾರುಗಳ ಹಾಲು, ಮಾಂಸ, ಮೊಟ್ಟೆ ಮತ್ತು ಉಣ್ಣೆ ಉತ್ಪಾದನೆಯಲ್ಲಿ ಕುಂಠಿತವಾಗುವುದು. ಕಲುಷಿತ ನೀರು, ಪೋಷಕಾಂಶಗಳ ಕೊರತೆಯಿಂದ ರೋಗನಿರೋಧಕ ಶಕ್ತಿ ಕುಂದುವುದರೊಂದಿಗೆ ರೋಗಗಳ ಉಲ್ಬಣದಿಂದಾಗಿ ಜಾನುವಾರುಗಳ ಸಾವು ಸಂಭವಿಸಬಹುದು.

ಅಸಂಪ್ರದಾಯಕ ಮೇವಿನ ಸೇವನೆಯಿಂದ Nitrate, Cyanide (Prussic acid) ವಿಷಭಾದೆಯಿಂದ ಸಾವು ಸಂಭವಿಸುತ್ತದೆ. ಗರ್ಭಧರಿಸಿದ ಜಾನುವಾರುಗಳಲ್ಲಿ ಗರ್ಭಪಾತದೊಂದಿಗೆ ಸಂತಾನೋತ್ಪತ್ತಿ ಕುಂಠಿತವಾಗುತ್ತದೆ. ಈ ಕಾರಣಗಳಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದು ರೈತರಿಗೆ ಅನಿವಾರ್ಯವಾಗುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ರೈತರ ಆಹಾರ ಮತ್ತು ಆರ್ಥಿಕ ಭದ್ರತೆಗೆ ಧಕ್ಕೆಯಾಗುತ್ತದೆ.

*ಬರ ನಿರ್ವಹಣೆಯಲ್ಲಿ ಪ್ರಮುಖವಾಗಿ ಕೈಗೊಳ್ಳಬೇಕಾದ ಕ್ರಮಗಳು*

ಲಭ್ಯವಿರುವ ಹಸಿರು ಮೇವನ್ನು ಒಣಗಿಸಿ ಹುಲ್ಲನ್ನು (Hay) ಮತ್ತು ರಸಮೇವಿನ (Sailage) ರೂಪದಲ್ಲಿ ಸಂಗ್ರಹಿಸಬೇಕು. ಮೇವು ಕತ್ತರಿಸುವ ಯಂತ್ರವನ್ನು ಉಪಯೋಗಿಸಿ ಮೇವು ಪೋಲಾಗದಂತೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳನ್ನು ಸುಡದೇ ಸಂಗ್ರಹಿಸಿ ಮೇವಾಗಿ ಬಳಸುವುದು.

ಭತ್ತ, ರಾಗಿ  ಕೊಯ್ಲು ಸಂದರ್ಭದಲ್ಲಿ ಬುಡಕ್ಕೆ ಹತ್ತಿರ ಕಟಾವು ಮಾಡಿ ಹುಲ್ಲನ್ನು ಸಂಗ್ರಹಿಸುವುದು. ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವುದು. ಹೆಚ್ಚು ತಾಪಮಾನವಿರುವ ಸಮಯದಲ್ಲಿ ನೀರನ್ನು ಜಾನುವಾರುಗಳ ಮೇಲೆ ಸಿಂಪಡಿಸುವುದು.

ಎಳೆಯ (ಬಲಿಯದ) ಹಸಿಮೇವನ್ನು ನೀಡುವುದರಿಂದ  ವಿಷಬಾಧೆಯಾಗುವುದನ್ನು ತಪ್ಪಿಸಲು 5-6 ದಿನಗಳ ಕಾಲ ಚೆನ್ನಾಗಿ ಒಣಗಿಸಿ ನೀಡುವುದು ಮತ್ತು ಸಂಗ್ರಹಿಸುವುದು. ಅಸಂಪ್ರದಾಯಕ ಮೇವುಗಳಿಂದಾಗಬಹುದಾದ ವಿಷಬಾಧೆಯನ್ನು ತಪ್ಪಿಸಲು ಸ್ಥಳೀಯ ಪಶುವೈದ್ಯರ ಸಲಹೆಯ ಮೇರೆಗೆ 6 ಸಾಂಪ್ರದಾಯಕ ಮೇವುಗಳನ್ನು ಬಳಸುವುದು.

ವಯಸ್ಕ ಹಸು ಮತ್ತು ಎಮ್ಮೆಗಳಿಗೆ 6 ಕೆ.ಜಿ ಒಣಮೇವು (20-30 ಲೀ ನೀರು), ಕುರಿ ಮತ್ತು ಮೇಕೆಗಳಿಗೆ 0.5 ಕೆ.ಜಿ. ಮೇವಿನ (3-5 ಲೀ. ನೀರು) ಸಂಪೂರ್ಣ ಆಹಾರ ನೀಡುವುದು. ಜಾನುವಾರುಗಳಿಗೆ ಆಹಾರ ನೀಡುವ ಪದ್ಧತಿಗಳಲ್ಲಿ ಸುಧಾರಿತ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು.

ಹುಲ್ಲು ಮತ್ತು ರಸಮೇವಿನ ರೂಪದಲ್ಲಿ ಮೇವು ಸಂಗ್ರಹಣೆ. ಒಣ ಮೇವಿನ ಯೂರಿಯ ಪೌಷ್ಟಿಕರಣೆ. Urea Mollasess mineral black licker  ಉಪಯೋಗಿಸುವುದು. TMR Blocks ಬಳಕೆ ಮಾಡುವುದು. Azolla & Hydrophonic ಬೆಳೆಯುವುದನ್ನು ರೂಢಿಸಿಕೊಳ್ಳುವುದು. Silvi-pasture & Horti-pasture ಅಳವಡಿಕೆ. ನೀರಾವರಿ ಇರುವ ಪ್ರದೇಶಗಳಲ್ಲಿ ಮೇವಿನ ಬೆಳೆಗಳ ಉತ್ಪಾದನೆ ಮಾಡಬೇಕು.

(ಪ್ರಕಟಣೆ: ಉಪ ನಿರ್ದೇಶಕರು (ಆಡಳಿತ) ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

5 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

17 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago