ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ. ನೀವು ಜನ ಜಾನವಾರುಗಳಿಗೆ ಯಾವುದಕ್ಕೂ ತೊಂದರೆ ಆಗದಂತೆ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ, ಪಶು ಸಂಗೋಪನೆ, ಕೃಷಿ ಇಲಾಖೆಗಳ ಪ್ರಗತಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ತಿಳಿಸಿದರು.
DC, CEO, ಕಾರ್ಯದರ್ಶಿಗಳ ಸಭೆಯಲ್ಲಿ ನಾನು ಕೊಟ್ಟ ಸೂಚನೆಗಳು, ನಿರ್ದೇಶನಗಳು ಚಾಚೂ ತಪ್ಪದೆ ಜಾರಿ ಆಗಿದೆಯಾ? ಎಷ್ಟು ಜಾರಿ ಆಗಿದೆ ಎನ್ನುವ ಕುರಿತು ಸಭೆಗೆ ಸ್ಪಷ್ಟ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾರ್ಚ್, ಏಪ್ರಿಲ್, ಮೇ ತಿಂಗಳಿಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಇದೆ. ಆಗ 11 ಸಾವಿರ ಮೆಗಾವ್ಯಾಟ್ ಬಳಕೆ ಆಗುತ್ತಿತ್ತು. ಈಗ 15-16 ಸಾವಿರ ಮೆಘಾವ್ಯಾಟ್ ವಿದ್ಯುತ್ ಗೆ ಬೇಡಿಕೆ ಇದೆ. ರೈತರ ಪಂಪ್ ಸೆಟ್ ಮತ್ತು ಜನರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ನಕಾಶೆ, ಯೋಜನೆ ಸಿದ್ಧಪಡಿಸಿ ಅದಕ್ಕೆ ತಕ್ಕಂತೆ ಕ್ರಮ ವಹಿಸಬೇಕು. ಸದ್ಯ ಕಟಾವಿಗೆ ಬರುವ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಂಡ್ಯ ಜಿಲ್ಲೆಯ ಹಲವು ಭಾಗಗಳಲ್ಲಿ ಆನೆ, ಚಿರತೆ, ಹಾವಿನ ಕಾಟ ಇದ್ದು ಕೃಷಿಗೆ ರಾತ್ರಿ ವೇಳೆಗಿಂತ ಹಗಲಿನಲ್ಲೇ ನಿರಂತರ ಐದು ಗಂಟೆ ವಿದ್ಯುತ್ ಕೊಡಬೇಕು ಎನ್ನುವ ಬೇಡಿಕೆ ಇದೆ. ಬೇಡಿಕೆಗೆ ತಕ್ಕಂತೆ ಕ್ರಮ ವಹಿಸಲು ಸಾಧ್ಯವೇ ಪರೀಕ್ಷಿಸಿ ಎಂದರು.
ದಿನ ಬಿಟ್ಟು ದಿನ ಬೇರೆ ಬೇರೆ ಬ್ಯಾಚ್ ಗಳಲ್ಲಿ ನಿರಂತರ ಐದು ಗಂಟೆ 3 ಫೇಸ್ ವಿದ್ಯುತ್ ಸರಬರಾಜು ಕಡ್ಡಾಯವಾಗಿ ಆಗಲೇಬೇಕು. ಯಾವ ವೇಳೆಯಲ್ಲಿ ವಿದ್ಯುತ್ ಸರಬರಾಜು ಆಗುತ್ತದೆ ಎನ್ನುವ ಮಾಹಿತಿ ಆಯಾ ಭಾಗದ ರೈತರಿಗೆ ಕೊಡಬೇಕು. ಈ ಸಭೆಯಲ್ಲಿ ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ಚಾಚೂ ತಪ್ಪದೆ ಜಾರಿ ಮಾಡಬೇಕು. ರೈತರಿಗೆ ದ್ರೋಹ ಮಾಡದೆ ಅವರಿಗೆ ನೆರವಾಗಿ. ತಪ್ಪಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಮಂಡ್ಯ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗಬಾರದು. ಬೇಕಿದ್ದರೆ ಎಷ್ಟಾದರೂ ಹಣ ಕೇಳಿ. ಕುಡಿಯುವ ನೀರಿನ ಬಗ್ಗೆ ದೂರು ಬಂದರೆ ನೇರವಾಗಿ ಜಿಲ್ಲಾ ಪಂಚಾಯ್ತಿ CEO ಅವರನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಮಳವಳ್ಳಿಯಲ್ಲಿ ಕುಡಿಯುವ ನೀರು ಪೈಪ್ ಲೈನ್ ಕಾಮಗಾರಿಯನ್ನು ಅರ್ಧಕ್ಕೇ ನಿಲ್ಲಿಸಿ, ಕಳಪೆ ಕಾಮಗಾರಿ ಮಾಡಿರುವ ಕುರಿತು ತನಿಖೆ ನಡೆಸಿ ಎಲ್ಲಿ ತಪ್ಪಾಗಿದೆ ಎಂದು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ಹೇಳಿದರು.
100 ಬೆಡ್ ಗಳ ಹೆರಿಗೆ ಆಸ್ಪತ್ರೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಬಾಕಿ ಕೆಲಸ ಮುಗಿಸಲು ಕೇವಲ 8 ಕೋಟಿ ರೂಪಾಯಿ ಅಗತ್ಯವಿದ್ದು, ಈ ಹಣ ಬಿಡುಗಡೆಗೊಳಿಸುವುದು ಎಂದರು.
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ಅಗತ್ಯ ಅಂಡರ್ ಪಾಸ್, ಡ್ರೈನೇಜ್ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ನಡೆಸಬೇಕಿದೆ. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ, ನಾನು ಈ ಬಗ್ಗೆ ಕೇಂದ್ರ ಸಚಿವರನ್ನು ಭೇಟಿಯಾದಾಗ ಅಗತ್ಯ ಕಾಮಗಾರಿಗಳಿಗೆಲ್ಲಾ ಅನುಮತಿ ನೀಡುವ ಭರವಸೆ ನೀಡಿದ್ದರು. ಆದಷ್ಟು ಬೇಗ ಸಂಬಂಧಪಟ್ಟವರನ್ನು ಸಂಪರ್ಕಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು ಜನರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…