ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಾಜ್ಯದ 53 ತಾಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ದೃಢೀಕರಿಸಿ ಅಧಿಸೂಚನೆ ಹೊರಡಿಸಿದ್ದು, ಈ ಪಟ್ಟಿಯಲ್ಲಿ ದೊಡ್ಡಬಳ್ಳಾಪುರವೂ ಸ್ಥಾನ ಪಡೆದಿದೆ.
2020ರ ಬರ ನಿರ್ವಹಣಾ ಕೈಪಿಡಿಯಲ್ಲಿ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಬರ ಪರಿಸ್ಥಿತಿಯ ಪರಿಶೀಲನೆ ನಡೆಸಲಾಗಿದೆ. ‘ಕ್ರಾಪ್ ಲಾಸ್ GT’ ಆಪ್ ಮೂಲಕ ಸಂಗ್ರಹಿಸಲಾದ ಮಾಹಿತಿಯ ಜೊತೆಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ನಡೆಸಿದ ಗ್ರೌಂಡ್ ಟ್ರೂಥಿಂಗ್ ವರದಿಯನ್ನೂ ಪರಿಗಣಿಸಿ ಬರಪೀಡಿತ ತಾಲೂಕುಗಳನ್ನು ಗುರುತಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ 190ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದರೂ, ಸರ್ಕಾರ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿತ್ತು. ಇದಕ್ಕೆ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ಬರದ ತೀವ್ರತೆ ಹೆಚ್ಚಿರುವ ಇನ್ನಷ್ಟು ತಾಲೂಕುಗಳನ್ನು ಪಟ್ಟಿಗೆ ಸೇರ್ಪಡೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು.
ಬಳಿಕ 23 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು. ಇದೀಗ ಮತ್ತಷ್ಟು 53 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ನಡೆಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಅದರ ಆಧಾರದ ಮೇಲೆ ಈ ತಾಲೂಕುಗಳನ್ನು ಬರಪೀಡಿತವೆಂದು ದೃಢೀಕರಿಸಲಾಗಿದೆ.
ಶಾಸಕ ಧೀರಜ್ ಮುನಿರಾಜ್ ಮನವಿ
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆ ಕೊರತೆ, ಬೆಳೆ ನಷ್ಟ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಪರಿಗಣಿಸಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಶಾಸಕ ಧೀರಜ್ ಮುನಿರಾಜ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದೇ ವೇಳೆ, ದೊಡ್ಡಬಳ್ಳಾಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂಬ ಆಗ್ರಹ ತಾಲೂಕಿನ ರೈತರು ಹಾಗೂ ಸಾರ್ವಜನಿಕರಿಂದಲೂ ಬಲವಾಗಿ ಕೇಳಿಬಂದಿತ್ತು. ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಘೋಷಣೆಯಿಂದ ಸರ್ಕಾರದ ಪರಿಹಾರ ಹಾಗೂ ನೆರವು ದೊರೆಯುವ ನಿರೀಕ್ಷೆ ಹೆಚ್ಚಾಗಿದೆ.
ದೊಡ್ಡಬಳ್ಳಾಪುರ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವುದು, ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…