Categories: ರಾಜ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ. ಬಿಡುಗಡೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33,000 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ದೆಹಲಿಗೆ ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಕೇಂದ್ರ ಸರ್ಕಾರದ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದು ಹೇಳಿದ್ದಾರೆ.

ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಗೆ ಸಾಕ್ಷಿ. ನಾವು ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ಪಕ್ಷ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ರಾಜ್ಯ ಬಿಜೆಪಿಯವರು ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ  ನರೇಂದ್ರಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು‌.

ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ. ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದು ಹೇಳಿದರು.

 ಒಬ್ಬಂಟಿಗಳಾಗಿದ್ದ ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರ ಕೊಲೆಯಾಗಿರುವ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯ ತಿಳಿಯಲಿದೆ ಎಂದರು.

ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿದ್ದಾರೆ. ನಮಗೆ ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದರು. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿ ಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದು ತಿಳಿಸಿದರು.

ಸಿಎಂ ಕುರ್ಚಿ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ  ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಿಂದೆ ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

10 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago