Categories: ರಾಜ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ. ಬಿಡುಗಡೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33,000 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ದೆಹಲಿಗೆ ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಕೇಂದ್ರ ಸರ್ಕಾರದ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದು ಹೇಳಿದ್ದಾರೆ.

ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಗೆ ಸಾಕ್ಷಿ. ನಾವು ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ಪಕ್ಷ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ರಾಜ್ಯ ಬಿಜೆಪಿಯವರು ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ  ನರೇಂದ್ರಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು‌.

ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ. ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದು ಹೇಳಿದರು.

 ಒಬ್ಬಂಟಿಗಳಾಗಿದ್ದ ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರ ಕೊಲೆಯಾಗಿರುವ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯ ತಿಳಿಯಲಿದೆ ಎಂದರು.

ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿದ್ದಾರೆ. ನಮಗೆ ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದರು. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿ ಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದು ತಿಳಿಸಿದರು.

ಸಿಎಂ ಕುರ್ಚಿ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ  ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಿಂದೆ ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

6 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

6 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

10 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

22 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago