ಬರಿಗೈಯಲ್ಲಿ ಬಂದವನಿಗೆ ಸಿಕ್ತು ಬರೋಬ್ಬರಿ 94ಲಕ್ಷ: ಆ ಹಣ ಏನು ಮಾಡಬೇಕು ಎಂದು 6ದಿನ ಗೊಂದಲದಲ್ಲಿದ್ದ ಯುವಕ; ಕೊನೆಗೆ ಆಗಿದ್ದೇನು? ಇಲ್ಲಿದೆ ಮಾಹಿತಿ

ಬರಿಗೈಯಲ್ಲಿ ಬಂದ ಯುವಕನಿಗೆ ಬರೋಬ್ಬರಿ 94 ಲಕ್ಷ ಹಣ ಸಿಕ್ಕಿದ್ದೆ ತಡ ಕೇವಲ ಹತ್ತೇ ಹತ್ತು ಸೆಕೆಂಡ್​ನಲ್ಲಿ ಯಾವ ಪರಿಶ್ರಮವೂ ಇಲ್ಲದೆ ಲಕ್ಷಾಧಿಪತಿಯಾಗಿಬಿಟ್ಟಿದ್ದ. ಅಷ್ಟೋಂದು ಹಣ ನೋಡಿದ ಬಳಿಕ ಏನು ಮಾಡಬೇಕು ಅನ್ನೋ ಗೊಂದಲದಲ್ಲೇ ಆ ಯುವಕ 6 ದಿನ ಕಳೆದಿದ್ದ. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಸದ್ಯ ಪೊಲೀಸರ ಅತಿಥಿಯಾಗಬೇಕಾದ ಪರಿಸ್ಥಿತಿ ಒದಗಿಬಂದಿದೆ.

94ಲಕ್ಷ ಹಣ ಸಿಕ್ಕಿದ್ದು ಹೇಗೆ?

ಬೆಂಗಳೂರು ನಗರದ ಚಂದ್ರ ಲೇಔಟ್ ನಿವಾಸಿಯಾಗಿರುವ ಪ್ರಮೋದ್ ಎಂಬಾತ ಸೈಟ್ ಖರೀದಿಸಲು 94 ಲಕ್ಷ ರೂ. ಹಣ ಶೇಖರಿಸಿಟ್ಟಿದ್ದ. ಅದನ್ನ ತನ್ನ ಸ್ನೇಹಿತನ ಅಂಗಡಿಯಲ್ಲಿ ಲೆಕ್ಕಾ ಮಾಡಿ ನಂತರ ವಕೀಲರ ಕಚೇರಿಗೆ ಹೋಗಿ ಸೈಟ್ ಖರೀದಿಸಲು ಬೇಕಾದ ಏರ್ಪಾಟು ಮಾಡಿಕೊಳ್ಳೋಣ ಎಂದು ಬ್ಯಾಗ್​ನಲ್ಲಿ ಡಾಕ್ಯುಮೆಂಟ್ಸ್ ಇಟ್ಟು, ಬಾಕ್ಸ್​ನಲ್ಲಿ ಎಲ್ಲಾ ಹಣವನ್ನು ತುಂಬಿಸಿ ಹಣದ ಬಾಕ್ಸ್ ಅನ್ನು ತಂದು ಕಾರಿನಲ್ಲಿ ಇಡಲು ಮುಂದಾಗಿದ್ದ. ಇನ್ನೇನು ಮನೆ ಕೆಳಗೆ ಬರ್ತಿದ್ದಂತೆ ಕಾರಿನ ಡೋರ್ ಓಪನ್ ಮಾಡಬೇಕಿತ್ತು. ಹಾಗಾಗಿ ಕೈನಲ್ಲಿದ್ದ ಹಣವನ್ನು ಅಪರಿಚಿತ ಆ್ಯಕ್ಟಿವಾ ಬೈಕ್ ಮೇಲಿಟ್ಟಿದ್ದಾರೆ. ಬಳಿಕ ಕಾರ್ ಡೋರ್ ಓಪನ್ ಮಾಡಿ ಸೈಟ್ ಖರೀದಿಗೆ ಬೇಕಿದ್ದ ದಾಖಲಾತಿ ಇದ್ದ ಬ್ಯಾಗನ್ನು ಕಾರಿನಲ್ಲಿ ಹಾಕಿಕೊಂಡು ಪ್ರಮೋದ್ ತಮ್ಮ ಸ್ನೇಹಿತನ ಅಂಗಡಿಗೆ ಹೊರಟಿದ್ದಾರೆ.

ಪ್ರಮೋದ್ ಕಾರು ಹೊರಡುತ್ತಿದ್ದಂತೆ ಅದೇ ರಸ್ತೆಯಲ್ಲಿ ಬಂದ ವರುಣ್ ಎಂಬ ಯುವಕ ಪಾರ್ಕ್ ಮಾಡಿದ್ದ ತನ್ನ ಬೈಕ್​ ಹತ್ತಿರ ಬರುತ್ತಾನೆ. ಈ ವೇಳೆ ಬೈಕ್ ಮೇಲೆ ಒಂದು ಬಾಕ್ಸ್ ಸಿಕಿದ್ದು ಅದನ್ನು ತೆರೆದು ನೋಡಿದಾಗ ಕಂತೆ ಕಂತೆ ಹಣ ಸಿಕ್ಕಿದೆ. ಹಣ ಸಿಕ್ಕಿದ್ದೇ ತಡ ವರುಣ್ ಹಣದ ಸಮೇತ ಆ ಸ್ಥಳದಿಂದ ಎಸ್ಕೇಪ್ ಆಗುತ್ತಾನೆ. ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಡಿಪಾರ್ಟ್ ಮೆಂಟ್​ನಲ್ಲಿ ಕೆಲಸ ಮಾಡುವ ವರುಣ್ ತನ್ನ ಶ್ರೀನಗರ ಮನೆಯಲ್ಲಿ ಹಣವನ್ನ ಬಚ್ಚಿಟ್ಟಿರುತ್ತಾನೆ. 94 ಲಕ್ಷ ರೂ. ಹಣ ಏನು ಮಾಡಬೇಕು ಎನ್ನುವ ಗೊಂದಲದಲ್ಲೇ ಐದು ದಿನ ಕಳೆದಿದ್ದಾನೆ. ಜೊತೆಗೆ ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಖರೀದಿಸಲು ಪ್ಲಾನ್ ಮಾಡ್ಕೊಂಡಿದ್ದಾನೆ. ಆದರೆ ಎಲ್ಲಿಯೂ ಹಣ ಖರ್ಚು ಮಾಡದೇ ಮನೆಯಲ್ಲಿ ಬಚ್ಚಿಟ್ಟಿರುತ್ತಾನೆ.

ಬೈಕ್ ಹೊರಟ ಜಾಡು ಹಿಡಿಯಲು 300ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ

ಇನ್ನು ಸ್ನೇಹಿತನ ಅಂಗಡಿಗೆ ಹೋಗಿ ಕಾರು ಪರಿಶೀಲಿಸಿದ ಪ್ರಮೋದ್​ಗೆ ಶಾಕ್ ಆಗಿದೆ. ತಕ್ಷಣ ಪ್ರಮೋದ್ ವಾಪಸ್ಸು ಬಂದು ನೋಡಿದಾಗ ಬೈಕ್ ಹಾಗೂ ಹಣ ಎರಡೂ ಇರಲಿಲ್ಲ. ಕೂಡಲೇ ಪ್ರಮೋದ್ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಬೈಕ್ ಹೊರಟ ಜಾಡು ಕಂಡುಹಿಡಿಯಲು ಒಟ್ಟು 300ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಬಲೆಗೆ ಬಿದ್ದಿದ್ದಾನೆ.

ಸದ್ಯ ಹಣ ಎಸ್ಕೇಪ್ ಮಾಡಿದ್ದ ವರುಣ್ ನನ್ನು ವಶಕ್ಕೆ ಪಡೆದು 94 ಲಕ್ಷ ಹಣವನ್ನು ವಾಪಸ್ ಪಡೆಯಲಾಗಿದೆ.

ಹಣ ಸಿಕ್ತು ಅಂತಾ ಮನೆಗೆ ತೆಗೆದುಕೊಂಡು ಹೋಗಿ ಆರೋಪಿಯಾದ, ಮನೆಗೆ ಅಲ್ಲದೇ ನೇರವಾಗಿ ಆ ಹಣವನ್ನ ಪೊಲೀಸರಿಗೆ ಒಪ್ಪಿಸಿದ್ದರೆ ಹೀರೋ ಆಗುತ್ತಿದ್ದ. ಆದ್ದರಿಂದ ಪರರ ವಸ್ತು ಯಾವತ್ತಿದ್ದರೂ ಅದು ಪಾಶಾಣಕ್ಕೆ ಸಮ, ತಮ್ಮಲ್ಲದ ವಸ್ತುಗಳಿಗೆ ಯಾವ ಕಾರಣಕ್ಕೂ ಆಸೆ ಪಡಬಾರದು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

7 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

8 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

13 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

15 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

17 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

19 hours ago