ಬರಿಗೈಯಲ್ಲಿ ಬಂದವನಿಗೆ ಸಿಕ್ತು ಬರೋಬ್ಬರಿ 94ಲಕ್ಷ: ಆ ಹಣ ಏನು ಮಾಡಬೇಕು ಎಂದು 6ದಿನ ಗೊಂದಲದಲ್ಲಿದ್ದ ಯುವಕ; ಕೊನೆಗೆ ಆಗಿದ್ದೇನು? ಇಲ್ಲಿದೆ ಮಾಹಿತಿ

ಬರಿಗೈಯಲ್ಲಿ ಬಂದ ಯುವಕನಿಗೆ ಬರೋಬ್ಬರಿ 94 ಲಕ್ಷ ಹಣ ಸಿಕ್ಕಿದ್ದೆ ತಡ ಕೇವಲ ಹತ್ತೇ ಹತ್ತು ಸೆಕೆಂಡ್​ನಲ್ಲಿ ಯಾವ ಪರಿಶ್ರಮವೂ ಇಲ್ಲದೆ ಲಕ್ಷಾಧಿಪತಿಯಾಗಿಬಿಟ್ಟಿದ್ದ. ಅಷ್ಟೋಂದು ಹಣ ನೋಡಿದ ಬಳಿಕ ಏನು ಮಾಡಬೇಕು ಅನ್ನೋ ಗೊಂದಲದಲ್ಲೇ ಆ ಯುವಕ 6 ದಿನ ಕಳೆದಿದ್ದ. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಸದ್ಯ ಪೊಲೀಸರ ಅತಿಥಿಯಾಗಬೇಕಾದ ಪರಿಸ್ಥಿತಿ ಒದಗಿಬಂದಿದೆ.

94ಲಕ್ಷ ಹಣ ಸಿಕ್ಕಿದ್ದು ಹೇಗೆ?

ಬೆಂಗಳೂರು ನಗರದ ಚಂದ್ರ ಲೇಔಟ್ ನಿವಾಸಿಯಾಗಿರುವ ಪ್ರಮೋದ್ ಎಂಬಾತ ಸೈಟ್ ಖರೀದಿಸಲು 94 ಲಕ್ಷ ರೂ. ಹಣ ಶೇಖರಿಸಿಟ್ಟಿದ್ದ. ಅದನ್ನ ತನ್ನ ಸ್ನೇಹಿತನ ಅಂಗಡಿಯಲ್ಲಿ ಲೆಕ್ಕಾ ಮಾಡಿ ನಂತರ ವಕೀಲರ ಕಚೇರಿಗೆ ಹೋಗಿ ಸೈಟ್ ಖರೀದಿಸಲು ಬೇಕಾದ ಏರ್ಪಾಟು ಮಾಡಿಕೊಳ್ಳೋಣ ಎಂದು ಬ್ಯಾಗ್​ನಲ್ಲಿ ಡಾಕ್ಯುಮೆಂಟ್ಸ್ ಇಟ್ಟು, ಬಾಕ್ಸ್​ನಲ್ಲಿ ಎಲ್ಲಾ ಹಣವನ್ನು ತುಂಬಿಸಿ ಹಣದ ಬಾಕ್ಸ್ ಅನ್ನು ತಂದು ಕಾರಿನಲ್ಲಿ ಇಡಲು ಮುಂದಾಗಿದ್ದ. ಇನ್ನೇನು ಮನೆ ಕೆಳಗೆ ಬರ್ತಿದ್ದಂತೆ ಕಾರಿನ ಡೋರ್ ಓಪನ್ ಮಾಡಬೇಕಿತ್ತು. ಹಾಗಾಗಿ ಕೈನಲ್ಲಿದ್ದ ಹಣವನ್ನು ಅಪರಿಚಿತ ಆ್ಯಕ್ಟಿವಾ ಬೈಕ್ ಮೇಲಿಟ್ಟಿದ್ದಾರೆ. ಬಳಿಕ ಕಾರ್ ಡೋರ್ ಓಪನ್ ಮಾಡಿ ಸೈಟ್ ಖರೀದಿಗೆ ಬೇಕಿದ್ದ ದಾಖಲಾತಿ ಇದ್ದ ಬ್ಯಾಗನ್ನು ಕಾರಿನಲ್ಲಿ ಹಾಕಿಕೊಂಡು ಪ್ರಮೋದ್ ತಮ್ಮ ಸ್ನೇಹಿತನ ಅಂಗಡಿಗೆ ಹೊರಟಿದ್ದಾರೆ.

ಪ್ರಮೋದ್ ಕಾರು ಹೊರಡುತ್ತಿದ್ದಂತೆ ಅದೇ ರಸ್ತೆಯಲ್ಲಿ ಬಂದ ವರುಣ್ ಎಂಬ ಯುವಕ ಪಾರ್ಕ್ ಮಾಡಿದ್ದ ತನ್ನ ಬೈಕ್​ ಹತ್ತಿರ ಬರುತ್ತಾನೆ. ಈ ವೇಳೆ ಬೈಕ್ ಮೇಲೆ ಒಂದು ಬಾಕ್ಸ್ ಸಿಕಿದ್ದು ಅದನ್ನು ತೆರೆದು ನೋಡಿದಾಗ ಕಂತೆ ಕಂತೆ ಹಣ ಸಿಕ್ಕಿದೆ. ಹಣ ಸಿಕ್ಕಿದ್ದೇ ತಡ ವರುಣ್ ಹಣದ ಸಮೇತ ಆ ಸ್ಥಳದಿಂದ ಎಸ್ಕೇಪ್ ಆಗುತ್ತಾನೆ. ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಡಿಪಾರ್ಟ್ ಮೆಂಟ್​ನಲ್ಲಿ ಕೆಲಸ ಮಾಡುವ ವರುಣ್ ತನ್ನ ಶ್ರೀನಗರ ಮನೆಯಲ್ಲಿ ಹಣವನ್ನ ಬಚ್ಚಿಟ್ಟಿರುತ್ತಾನೆ. 94 ಲಕ್ಷ ರೂ. ಹಣ ಏನು ಮಾಡಬೇಕು ಎನ್ನುವ ಗೊಂದಲದಲ್ಲೇ ಐದು ದಿನ ಕಳೆದಿದ್ದಾನೆ. ಜೊತೆಗೆ ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಖರೀದಿಸಲು ಪ್ಲಾನ್ ಮಾಡ್ಕೊಂಡಿದ್ದಾನೆ. ಆದರೆ ಎಲ್ಲಿಯೂ ಹಣ ಖರ್ಚು ಮಾಡದೇ ಮನೆಯಲ್ಲಿ ಬಚ್ಚಿಟ್ಟಿರುತ್ತಾನೆ.

ಬೈಕ್ ಹೊರಟ ಜಾಡು ಹಿಡಿಯಲು 300ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ

ಇನ್ನು ಸ್ನೇಹಿತನ ಅಂಗಡಿಗೆ ಹೋಗಿ ಕಾರು ಪರಿಶೀಲಿಸಿದ ಪ್ರಮೋದ್​ಗೆ ಶಾಕ್ ಆಗಿದೆ. ತಕ್ಷಣ ಪ್ರಮೋದ್ ವಾಪಸ್ಸು ಬಂದು ನೋಡಿದಾಗ ಬೈಕ್ ಹಾಗೂ ಹಣ ಎರಡೂ ಇರಲಿಲ್ಲ. ಕೂಡಲೇ ಪ್ರಮೋದ್ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಬೈಕ್ ಹೊರಟ ಜಾಡು ಕಂಡುಹಿಡಿಯಲು ಒಟ್ಟು 300ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಬಲೆಗೆ ಬಿದ್ದಿದ್ದಾನೆ.

ಸದ್ಯ ಹಣ ಎಸ್ಕೇಪ್ ಮಾಡಿದ್ದ ವರುಣ್ ನನ್ನು ವಶಕ್ಕೆ ಪಡೆದು 94 ಲಕ್ಷ ಹಣವನ್ನು ವಾಪಸ್ ಪಡೆಯಲಾಗಿದೆ.

ಹಣ ಸಿಕ್ತು ಅಂತಾ ಮನೆಗೆ ತೆಗೆದುಕೊಂಡು ಹೋಗಿ ಆರೋಪಿಯಾದ, ಮನೆಗೆ ಅಲ್ಲದೇ ನೇರವಾಗಿ ಆ ಹಣವನ್ನ ಪೊಲೀಸರಿಗೆ ಒಪ್ಪಿಸಿದ್ದರೆ ಹೀರೋ ಆಗುತ್ತಿದ್ದ. ಆದ್ದರಿಂದ ಪರರ ವಸ್ತು ಯಾವತ್ತಿದ್ದರೂ ಅದು ಪಾಶಾಣಕ್ಕೆ ಸಮ, ತಮ್ಮಲ್ಲದ ವಸ್ತುಗಳಿಗೆ ಯಾವ ಕಾರಣಕ್ಕೂ ಆಸೆ ಪಡಬಾರದು.

Ramesh Babu

Journalist

Recent Posts

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

2 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

13 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

18 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

19 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

21 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

1 day ago