ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತ ಆರೋಪಿಗಳು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago