ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್ ಆ್ಯಂಡ್ ಮರ್ಡರ್ ಕೇಸ್ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.
ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್, ಮಾರ್ತಾಂಡ ಅಲಿಯಾಸ್ ಆಟೋ ಚಂದ್ರ, ರಂಜೀತ್ ಕುಮಾರ್, ಮಂಜುನಾ ಅಲಿಯಾಸ್ ಕಬಾಬ್ ಮಂಜು ಬಂಧಿತ ಆರೋಪಿಗಳು.
ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.
ಮೃತ ಗಿರೀಶ್ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.
ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.
ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…