ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತ ಆರೋಪಿಗಳು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

Ramesh Babu

Journalist

Recent Posts

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

6 hours ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

6 hours ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

10 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

12 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago