ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತ ಆರೋಪಿಗಳು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

12 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

14 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

17 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

19 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

19 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

1 day ago