ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತ ಆರೋಪಿಗಳು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

Ramesh Babu

Journalist

Recent Posts

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

4 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

4 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago