ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತ ಆರೋಪಿಗಳು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

35 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

40 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

8 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

8 hours ago