ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ ಮಾಡಿ ನಮಗೂ ಕೊಲೆಗು ಏನು ಸಂಬಂಧವಿಲ್ಲ ಅಂತಾ ಆರಾಮವಾಗಿದ್ದ ಆರೋಪಿಗಳು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಓರ್ವ ನಾಪತ್ತೆ ಆಗಿದ್ದಾನೆ. ದಿವಾಕರ್, ಹರೀಶ್​, ಮಾರ್ತಾಂಡ ಅಲಿಯಾಸ್​ ಆಟೋ ಚಂದ್ರ, ರಂಜೀತ್​ ಕುಮಾರ್, ಮಂಜುನಾ ಅಲಿಯಾಸ್​ ಕಬಾಬ್ ಮಂಜು ಬಂಧಿತ ಆರೋಪಿಗಳು.

ಸದ್ಯ ಆರೋಪಿಗಳನ್ನು ಬಂಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಗಿರೀಶ್ (27) ಕೊಲೆ ರಹಸ್ಯ ಬಯಲು ಮಾಡಿದ್ದಾರೆ.

ಮೃತ ಗಿರೀಶ್​ ಶಿಡ್ಲಘಟ್ಟ ನಗರದ ನಿವಾಸಿ. ಆಟೊ ಚಾಲಕನಾಗಿದ್ದ. ಹಳೆ ದ್ವೇಷ ಹಿನ್ನೆಲೆ 2019 ಮೇ 12 ರಂದು ಗಿರೀಶ್​ ನನ್ನು ಕೊಲೆ ಮಾಡಲಾಗಿತ್ತು. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಶಿಡ್ಲಘಟ್ಟದಿಂದ ಕಿಡ್ಯ್ನಾಪ್ ಮಾಡಿ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಬಳಿಕ ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಬಿಸಾಡಿದ್ದರು. ತಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ ಕೂಡ ದಾಖಲಾಗಿತ್ತು.

ತನಿಖೆ ನಡೆಸಿದ್ದ ತಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಆದರೆ ಸರಿಯಾದ ಸಾಕ್ಷ್ಯಾಧಾರ ಕೊರತೆ ಮತ್ತು ಚಾರ್ಜ್​ಶೀಟ್ ಸಲ್ಲಿಸಿರಲಿಲ್ಲ. ಹೀಗಾಗಿ ಕೋರ್ಟ್​​ ಬಂಧಿತ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಿತ್ತು. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿತ್ತು. ಕೇಸ್​​ ಹಾಗೇ ಉಳಿದುಕೊಂಡಿತ್ತು. ಬಳಿಕ ಬೇರೆ ಅಧಿಕಾರಿಗಳ ಗಮನಕ್ಕೆ ಬಂದು ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ ಇದೀಗ ಐವರ ಬಂಧನವಾಗಿದೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

14 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago