ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್ ಗೆ ಕೇಕ್ ಕಟ್ ಮಾಡಿ, ಬರ್ತಡೇ ಪಾರ್ಟಿ ಮಾಡಲು ಮಾ.10 ರಾತ್ರಿ ಸುಮಾರು 11 ಗಂಟೆಗೆ ಬಾರ್ ನಿಂದ ಎಣ್ಣೆ ತಂದು ಕುಡಿಯಕ್ಕೆ ಗೀತಂ ಕಾಲೇಜು ಹಿಂಭಾಗ ಕುಳಿತುಕೊಳ್ಳುತ್ತಾರೆ. ಒಂದೇ ರೌಂಡ್ ಗೆ ತಂದಿರೋ ಎಲ್ಲಾ ಎಣ್ಣೆಯನ್ನ ಮುಗಿಸುತ್ತಾರೆ. ಅದು ಆ ಕುಡುಕರಿಗೆ ಸಾಕಾಗೋದಿಲ್ಲ. ಆ ಎಣ್ಣೆಯಲ್ಲಿ ಕಿಕ್ ಬರೋದಿಲ್ಲ. ಇನ್ನೂ ಕಿಕ್ ಬೇಕೆಂದರೆ ಮತ್ತೆ ಎಣ್ಣೆ ಬೇಕು. ಆದ್ರೆ, ಯಾರ ಜೇಬಲ್ಲಿ ದುಡ್ಡು ಇರೋದಿಲ್ಲ. ಏನಾದ್ರು ಮಾಡಿ ಕುಡಿಲೇ ಬೇಕು ಎಂದು ತೀರ್ಮಾನಿಸಿ ಗೀತಂ ಕಾಲೇಜು ರೋಡ್ ಹಿಡಿತಾರೆ…
ಮಾ. 11ರ ಮುಂಜಾನೆ ಸುಮಾರು 12:40ರ ಸಮಯದಲ್ಲಿ ಈ ಪೊರ್ಕಿಗಳಿಗೆ ಸಿಕ್ಕಿದ್ದು ಗೀತಂ ಕಾಲೇಜಿನ ವಿದ್ಯಾರ್ಥಿಗಳು, ಅನ್ಯ ಕೆಲಸದ ಮೇರೆಗೆ ಪಿಜಿಯಿಂದ ಹೊರಬಂದಿದ್ದಾಗ ಕುಡಿದ ಅಮಲಿನಲ್ಲಿ ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡುತ್ತಾರೆ. ಹೊಡೆದು ಬಡೆದು ಮೊಬೈಲ್ ಹಾಗೂ ಜೇಬುಗಳಲ್ಲಿ ಇದ್ದ ಹಣವನ್ನು ಕಸಿದುಕೊಳ್ಳುತ್ತಾರೆ. ನಂತರ ಬಲವಂತವಾಗಿ ಮೊಬೈಲ್ ಪಾಸ್ ವರ್ಡ್ ಪಡೆದು ಆನ್ ಲೈನ್ ಮೂಲಕ ಹಣವನ್ನು ದೋಚುತ್ತಾರೆ… ಹೀಗೆ ಇಬ್ಬರ ಬಳಿ ಸಾವಿರಾರು ರೂಪಾಯಿ ಹಣವನ್ನು ರಾಬರಿ ಮಾಡಿ ಕುಡಿದು ಎಂಜಾಯ್ ಮಾಡುತ್ತಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾ.11ರಂದು ದೂರು ದಾಖಲಾಗುತ್ತದೆ. ದೂರು ದಾಖಲಾಗುತ್ತಿದ್ದಂತೆ ಪೋಕರಿಗಳು ಮಂಗ ಮಾಯವಾಗುತ್ತಾರೆ. ಆದರೆ, ಪೊಲೀಸರು ಪೊರ್ಕಿಗಳ ಬೆನ್ನತ್ತಿ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಐವರನ್ನ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ… ಓರ್ವ ತಲೆಮರೆಸಿಕೊಂಡಿದ್ದಾನೆ. ಅವನ ಸೆರೆಗೂ ಪೊಲೀಸರು ಬಲೆ ಬೀಸಿದ್ದಾರೆ….
ಬಂಧಿತ ಆರೋಪಿಗಳ ವಿವರ
ಸೊಣ್ಣಪ್ಪನಹಳ್ಳಿ ಗ್ರಾಮದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ ಎ1 ಆನಂದ್ ಕುಮಾರ್ (25), ಎ2 ಡ್ರೈವರ್ ತಿಲಕ್ (19) ಎ3 ಗಾರೆ ಕೆಲಸಗಾರ ಆಕಾಶ್ (21), ಎ4 ಡ್ರೈವರ್ ಮುನೇಗೌಡ (21), ಎ5 ಕೋಲಾರದ ಮಾಲೂರು ಮೂಲದ ಅಕ್ಷಯ್ ಕುಮಾರ್, ಸದ್ಯ ತಲೆಮರೆಸಿಕೊಂಡಿದ್ದಾನೆ. ಎ6 ಗೌತಮ್ ಬಂಧಿತ ಆರೋಪಿಗಳು….
ಈ ಖದೀಮರಿಗೆ ಯುವಕರು ಸಿಕ್ಕಿದ್ದಕ್ಕೆ ಹಣ ಮಾತ್ರ ದೋಚಿ ಸುಮ್ಮನಾದ್ರು, ಒಂದು ವೇಳೆ ಯುವತಿಯರು ಸಿಕ್ಕಿದ್ರೆ ಏನು ಗತಿ….? ಈ ಪುಂಡರಿಗೆ ತಕ್ಕ ಪಾಠವಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಎಚ್ಚರ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…