ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಸಂದ್ರ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ರಾಗಿ, ಜೋಳ ಬೆಳೆ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ ರೈತರಿಂದ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ಮಾತನಾಡಿ ಜೂನ್, ಜುಲೈ ನಲ್ಲಿ ಕಡಿಮೆ ಮಳೆ ಆಗಿದೆ. ಆಗಸ್ಟ್ 15 ರೊಳಗೆ ಮಳೆ ಬರದಿದ್ದಲ್ಲಿ ಬಿತ್ತನೆ ಆಗಿರುವ ಬೆಳೆಗಳಿಗೆ ತೊಂದರೆ ಆಗುತ್ತದೆ. ಸಾಧ್ಯವಾದಷ್ಟು ಶಾರ್ಟ್ ಟರ್ಮ್ ರಾಗಿ ಬೆಳೆ ಆಯ್ಕೆ ಮಾಡಿಕೊಳ್ಳಿ ಬೇಗ ಬೆಳೆ ಬರುತ್ತದೆ ಎಂದು ರೈತರಿಗೆ ಸಲಹೆ ನೀಡಿದರು.
*ತಪ್ಪದೇ ಬೆಳೆ ವಿಮೆ ಮಾಡಿಸಿ*
ಮಳೆ ಅಭಾವದಿಂದ ಬೆಳೆ ನಷ್ಟ ಆಗುವ ಸಂಭವವಿದೆ. ಹಾಗಾಗಿ ತಪ್ಪದೇ ಎಲ್ಲಾ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಇದರಿಂದ ನಷ್ಟ ಪರಿಹಾರ ಸರಿದೂಗಲಿದೆ ಎಂದರು. ಈಗಾಗಲೇ ಹಲವಾರು ರೈತರು ರಾಗಿ, ಜೋಳ ಬಿತ್ತನೆ ಮಾಡಿದ್ದಾರೆ. ಮಳೆ ಕೊರತೆಯಿಂದ ಸರಿಯಾಗಿ ಹುಟ್ಟಿಲ್ಲ. ಆಗಸ್ಟ್ 30 ವರೆಗೆ ಕಾದು ನೋಡಬೇಕು ಮಳೆ ಬರದಿದಲ್ಲಿ ಸರ್ಕಾರ ಪರಿಹಾರದ ಬಗ್ಗೆ ಚಿಂತನೆ ಮಾಡಲಿದೆ ಎಂದು ಸಚಿವರು ಹೇಳಿದರು.
ಜಾನುವಾರುಗಳಿಗೆ ಮೇವಿಗೆ ಸಂಬಂಧಿಸಿದಂತೆ ರೈತರಿಗೆ ಮೇವು ಬಿತ್ತನೆ ಬೀಜ ಪೂರೈಕೆ ಮಾಡಿ. ಮೇವು ಕಿಟ್ ಗಳನ್ನು, ಸೈಲೇಜ್ ಆಹಾರದ ಬಗ್ಗೆ ರೈತರಿಗೆ ಅರಿವು ಮೂಡಿಸಿ, ಪ್ರಸ್ತುತ ಸನ್ನಿವೇಶದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಪಶುಸಂಗೋಪನೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಮಂಗಲ ಕೆರೆಯಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಿದರು. ಕೆರೆಗಳ ಹೂಳೆತ್ತುವ ಕೆಲಸ ಮೊದಲು ಆಗಬೇಕಿದೆ. ನಂತರ ನೀರು ತುಂಬಿಸುವ ಕೆಲಸ ಮಾಡಬೇಕು. ಕೆರೆಗಳಲ್ಲಿರುವ ಬಿದಿರು ತೆಗೆಯಬೇಕು. ಅರಣ್ಯ ಇಲಾಖೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೆರೆಗೆ ಹುರಿದು ಬರುವ ನೀರಿನ ಕಾಲುವೆಗಳನ್ನು ಸ್ವಚ್ಚಗೊಳಿಸಿ ನೀರು ಸರಾಗವಾಗಿ ಹರಿಯಲು ಅನುಕೂಲವಾದರೆ ಮಳೆಗಾಲದಲ್ಲಿ ನೀರು ತುಂಬಲಿದೆ. ಎಲ್ಲಾ ಕೆರೆಗಳ ಸುತ್ತಲೂ ಬೌಂಡರಿ ಫಿಕ್ಸ್ ಮಾಡಿ ಸುತ್ತಲು ಟ್ರೆಂಚ್ ಅಗೆದು, ಹಣ್ಣಿನ ಗಿಡಗಳನ್ನು ಹಾಕಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ತೋಟಗಾರಿಕೆ, ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…