Categories: ಕೋಲಾರ

ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲಿ: ಡಾ. ಅಶ್ವತ್ ನಾರಾಯಣ ಅಂತ್ಯಜ

ಕೋಲಾರ: ಸರ್ವರಿಗೂ ಸಮಪಾಲು ಸಮಬಾಳು ಎಂಬ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷ ಹೆಚ್ಚು ಮತದಾರರಿರುವ ಬಲಗೈ ಸಮುದಾಯದಲ್ಲಿನ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಎಸ್ಸಿ ಘಟಕದ ಮಾಜಿ ರಾಜ್ಯ ಉಪಾಧ್ಯಕ್ಷ ಡಾ.ಅಶ್ವತ್ ನಾರಾಯಣ ಅಂತ್ಯಜ ಹೈಕಮಾಂಡ್ ಅನ್ನು ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸ್ವಾತಂತ್ರ ಬಂದಾಗಿನಿಂದ ಪರಿಶಿಷ್ಟ ಜಾತಿ ಅಸ್ಪೃಶ್ಯ ಸಮುದಾಯದ ಎಡಗೈ ಸಮಾಜದಿಂದ ಲೋಕಸಭೆಗೆ ಹೆಚ್ಚು ಅವಕಾಶ ನೀಡಲಾಗಿದೆ 1952 ರಿಂದ ಇಂದಿನವರೆಗೂ ಬಲಗೈ ಸಮುದಾಯಕ್ಕೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅವಕಾಶ ನೀಡದೆ ವಂಚನೆ ಮಾಡಿದೆ ಸಮುದಾಯದ ಅಭಿವೃದ್ಧಿಗೆ ಬಲಗೈ ಸಮುದಾಯಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ನಾನು ಕೂಡ ಕಳೆದ 30 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದು, ಜನತೆಯಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಸೇರಿದಂತೆ ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ, ನನಗೆ ರಾಜ್ಯ ಸರ್ಕಾರದಿಂದ ನಿಗಮ ಮಂಡಳಿ ಸ್ಥಾನ ಹಾಗೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ, ಅದು ಯಾವುದು ಸಹ ಸಾಧ್ಯವಾಗಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಿದ್ದೇನೆ ಈಗಾಗಲೇ ಬೂತ್ ಮಟ್ಟದಲ್ಲಿ ಭೇಟಿ ನೀಡಿ ಕಾರ್ಯಕರ್ತರು ಹಾಗೂ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ.ನನ್ನ ಹಿರಿತನ ಹಾಗೂ ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಗಣಿಸಿ ವರಿಷ್ಠರು ಕೋಲಾರ ಲೋಕಸಭೆ ಕ್ಷೇತ್ರದಿಂದ ಬಲಗೈ ಸಮುದಾಯಕ್ಕೆ ಸೇರಿದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಬೆಗ್ಲಿ ರಾಮಚಂದ್ರ ಮಾತನಾಡಿ ಕಳೆದ 30 ವರ್ಷಗಳಿಂದ ಪಕ್ಷದ ಸಂಘಟನೆ ಹಾಗೂ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ
ಬಲಗೈ ಸಮುದಾಯದ ಮುಖಂಡರಾದ
ಡಾ. ಅಶ್ವತ್ ನಾರಾಯಣ ಅಂತ್ಯಜ ರವರು
ಸೂಕ್ತ ಅಭ್ಯರ್ಥಿಯಾಗಿದ್ದು, ಅವರ ಸೇವೆಯನ್ನು ಪಕ್ಷದ ವರಿಷ್ಠರು ಗಣನೆಗೆ ತೆಗೆದುಕೊಂಡು ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.

ಈ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಉಪಾಧ್ಯಕ್ಷ ನಂಜುಂಡಪ್ಪ, ಜನಸೇವಾ ಅಲ್ಪಸಂಖ್ಯಾರ ಸೊಸೈಟಿ ಜಿಲ್ಲಾ ಅಧ್ಯಕ್ಷ ಎ. ಸೈಯದ್ ಪಾಷ ಇದ್ದರು

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

4 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

8 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago