ಬಲವಂತದ ಭೂಸ್ವಾಧೀನಕ್ಕೆ ವಿರೋಧ ಸೇರಿ 5 ಮಹತ್ವದ ನಿರ್ಣಯ: ಸಮ್ಮೇಳನದ 5 ನಿರ್ಣಯಗಳು ಇಲ್ಲಿವೆ ಓದಿ…

ಭೂಮಿ, ನೀರು, ಪರಿಸರ, ಭಾಷೆ ಮತ್ತು ಉದ್ಯೋಗಕ್ಕೆ ಸಂಬಂಧಪಟ್ಟ 5 ಮಹತ್ವದ ನಿರ್ಣಯಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೈಗೊಂಡಿದೆ.

ಭಾನುವಾರ ಸಮ್ಮೇಳನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ನಿರ್ಣಯಗಳನ್ನು ಮಂಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯಿಕ ಚಿಂತನೆಗಳನ್ನು ಮಾತ್ರ ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸದೆ ನಾಡಿನ ಸಮಗ್ರ ಅಭಿವೃದ್ದಿ ಮತ್ತು ಸವಾಲು, ನೆಲದ ಹೋರಾಟಗಳು, ಆತಂಕಗಳ ಬಗ್ಗೆಯೂ ತನ್ನ ಇಚ್ಛಾಶಕ್ತಿಯನ್ನು ಹಲವು ವೇಳೆ ಪ್ರದರ್ಶಿಸಿದೆ. ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಆಶೋತ್ತರಗಳೂ ಸಾಹಿತ್ಯಿಕ ಚಿಂತನೆಗಳ ಮೂಲ ಆಶಯವೇ ಆಗಿದೆ ಎಂದರು.

*ಸಮ್ಮೇಳನದ 5 ನಿರ್ಣಯಗಳು:*

1. ಅಭಿವೃದ್ದಿಯ ಹೆಸರಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಕೈಗಾರಿಕೆ ಹಾಗೂ ಇತರೆ ಉದ್ದೇಶಗಳಿಗಾಗಿ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾದೀನ ಪಡಿಸಿಕೊಳ್ಳುವ ಪ್ರಯತ್ನಗಳನ್ನು ಸಮ್ಮೇಳನ ಸ್ಪಷ್ಟವಾಗಿ ವಿರೋಧಿಸುತ್ತದೆ. ರೈತರ ಹಿತಾಸಕ್ತಿಯೇ ಪರಮೋಚ್ಛವಾಗಿದ್ದು, ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿಯಲ್ಲಿಕಳೆದ 1 ಸಾವಿರಕ್ಕೂ ಹೆಚ್ಚು ದಿನಗಳಿಂದ ಅನ್ನದಾತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.

2. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ, ಕೊನಘಟ್ಟ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಹಾಗೂ ರಾಸಾಯನಿಕ ತ್ಯಾಜ್ಯ ನೀರನ್ನು ಜೀವಂತ ಕೆರೆಗಳಿಗೆ ಹರಿಸುತ್ತಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಕೆರೆಗಳ ಸಂರಕ್ಷಣೆ ಕುರಿತ ಹೋರಾಟವನ್ನು ಸಮ್ಮೇಳನ ಬೆಂಬಲಿಸುತ್ತದೆ. ಈ ಭಾಗದ ಗ್ರಾಮಗಳಿಗೆ 3ನೇ ಹಂತದ ಶುದ್ದೀಕರಿಸಿದ ನೀರನ್ನು ಪೂರೈಸುವ ಮತ್ತು ಶುದ್ದ ಕುಡಿಯುವ ನೀರಿನ ಪೂರೈಕೆಗೆ ಕೂಡಲೇ ಕ್ರಮ ವಹಿಸುವಂತೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡುತ್ತದೆ.

3. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆ-ಕುಂಟೆಗಳು, ಜಲಮೂಲಗಳು, ಜೀವಿ ವೈವಿಧ್ಯತೆಯನ್ನು ರಕ್ಷಿಸಿ, ಪರಂಪರೆಯ ಅನನ್ಯತೆಯನ್ನು ಉಳಿಸಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ದೊಡ್ಡಬಳ್ಳಾಪುರ ಸೇರಿದಂತೆ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಬಿಬಿಎಂಪಿ ಕಸ ಸಂಸ್ಕರಣಾ ನೂತನ ಘಟಕಗಳನ್ನು ತೆರೆಯಬಾರದು.

4. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಕನ್ನಡ ನುಡಿ ಎಲ್ಲ ಹಂತಗಳಲ್ಲೂ ಅನುಷ್ಠಾನಗೊಳ್ಳಬೇಕು. ಕನ್ನಡವನ್ನು ಭವಿಷ್ಯದ ಉದ್ಯೋಗದಾಯಿ ಭಾಷೆಯಾಗಿ ರೂಪಿಸುವ ನಿಟ್ಟಿನಲ್ಲಿ ವಿಜ್ಞಾನ, ತಂತ್ರಜ್ಞಾನ, ಆಡಳಿತ, ಕಾನೂನಿನ ಭಾಷೆಯಾಗಿ ರೂಪಿಸಲು ಕ್ರಮ ವಹಿಸಬೇಕು. ಪಾರಿಭಾಷಿಕ ಪದಕೋಶಗಳ ರಚನೆ ಮತ್ತು ಪ್ರಕಟಣೆಗೆ ಸರ್ಕಾರ ಮುಂದಾಗಬೇಕು.

5. ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಇರುವ ಕೈಗಾರಿಕಾ ವಸಾಹತುಗಳು, ಕಾರ್ಖಾನೆ, ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಬೇಕು. ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಸೀಮಿತವಾಗದೆ, ಉನ್ನತ ಹಂತದ ಹುದ್ದೆಗಳಲ್ಲೂ ಸ್ಥಳೀಯರಿಗೆ ಮೀಸಲಾತಿ ಜಾರಿಗೊಳ್ಳಬೇಕು. ಉದ್ಯೋಗ ಕೌಶಲ್ಯಗಳ ತರಬೇತಿಗೆ ಕ್ರಮ ವಹಿಸಬೇಕು. ಜ್ಞಾನಾಧಾರಿತವಾಗಿ ಎಲ್ಲ ಭಾಷೆಗಳಿಗೂ ಮನ್ನಣೆ ನೀಡುವ ಕರ್ನಾಟಕದಲ್ಲಿ ಹಿಂದಿ ಸೇರಿದಂತೆ ಯಾವುದೇ ಭಾಷೆಯ ಬಲವಂತದ ಹೇರಿಕೆಯನ್ನು ಸಮ್ಮೇಳನ ಸ್ಪಷ್ಟವಾಗಿ ವಿರೋಧಿಸುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.

ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಜಿಲ್ಲಾ ಕೋಶಾಧ್ಯಕ್ಷ ಡಾ.ಮುನಿರಾಜು, ಕಾರ್ಯದರ್ಶಿ ಅಶ್ವತ್ಥಗೌಡ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ದೇವರಾಜ್, ನೆಲಮಂಗಲ ತಾಲೂಕು ಕಾರ್ಯದರ್ಶಿ ಸದಾನಂದ ಆರಾಧ್ಯ, ಭಾನುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

4 hours ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

7 hours ago

ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ಸಿಎಂ ಸಭೆ: ಸಭೆಯ ಪ್ರಮುಖಾಂಶಗಳು ಇಲ್ಲಿವೆ ಓದಿ…

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…

19 hours ago

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 day ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

1 day ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago