ಬಲವಂತದ ಭೂಸ್ವಾಧೀನಕ್ಕೆ ವಿರೋಧ ಸೇರಿ 5 ಮಹತ್ವದ ನಿರ್ಣಯ: ಸಮ್ಮೇಳನದ 5 ನಿರ್ಣಯಗಳು ಇಲ್ಲಿವೆ ಓದಿ…

ಭೂಮಿ, ನೀರು, ಪರಿಸರ, ಭಾಷೆ ಮತ್ತು ಉದ್ಯೋಗಕ್ಕೆ ಸಂಬಂಧಪಟ್ಟ 5 ಮಹತ್ವದ ನಿರ್ಣಯಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೈಗೊಂಡಿದೆ.

ಭಾನುವಾರ ಸಮ್ಮೇಳನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ನಿರ್ಣಯಗಳನ್ನು ಮಂಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯಿಕ ಚಿಂತನೆಗಳನ್ನು ಮಾತ್ರ ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸದೆ ನಾಡಿನ ಸಮಗ್ರ ಅಭಿವೃದ್ದಿ ಮತ್ತು ಸವಾಲು, ನೆಲದ ಹೋರಾಟಗಳು, ಆತಂಕಗಳ ಬಗ್ಗೆಯೂ ತನ್ನ ಇಚ್ಛಾಶಕ್ತಿಯನ್ನು ಹಲವು ವೇಳೆ ಪ್ರದರ್ಶಿಸಿದೆ. ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಆಶೋತ್ತರಗಳೂ ಸಾಹಿತ್ಯಿಕ ಚಿಂತನೆಗಳ ಮೂಲ ಆಶಯವೇ ಆಗಿದೆ ಎಂದರು.

*ಸಮ್ಮೇಳನದ 5 ನಿರ್ಣಯಗಳು:*

1. ಅಭಿವೃದ್ದಿಯ ಹೆಸರಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಕೈಗಾರಿಕೆ ಹಾಗೂ ಇತರೆ ಉದ್ದೇಶಗಳಿಗಾಗಿ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾದೀನ ಪಡಿಸಿಕೊಳ್ಳುವ ಪ್ರಯತ್ನಗಳನ್ನು ಸಮ್ಮೇಳನ ಸ್ಪಷ್ಟವಾಗಿ ವಿರೋಧಿಸುತ್ತದೆ. ರೈತರ ಹಿತಾಸಕ್ತಿಯೇ ಪರಮೋಚ್ಛವಾಗಿದ್ದು, ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿಯಲ್ಲಿಕಳೆದ 1 ಸಾವಿರಕ್ಕೂ ಹೆಚ್ಚು ದಿನಗಳಿಂದ ಅನ್ನದಾತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.

2. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ, ಕೊನಘಟ್ಟ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಹಾಗೂ ರಾಸಾಯನಿಕ ತ್ಯಾಜ್ಯ ನೀರನ್ನು ಜೀವಂತ ಕೆರೆಗಳಿಗೆ ಹರಿಸುತ್ತಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಕೆರೆಗಳ ಸಂರಕ್ಷಣೆ ಕುರಿತ ಹೋರಾಟವನ್ನು ಸಮ್ಮೇಳನ ಬೆಂಬಲಿಸುತ್ತದೆ. ಈ ಭಾಗದ ಗ್ರಾಮಗಳಿಗೆ 3ನೇ ಹಂತದ ಶುದ್ದೀಕರಿಸಿದ ನೀರನ್ನು ಪೂರೈಸುವ ಮತ್ತು ಶುದ್ದ ಕುಡಿಯುವ ನೀರಿನ ಪೂರೈಕೆಗೆ ಕೂಡಲೇ ಕ್ರಮ ವಹಿಸುವಂತೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡುತ್ತದೆ.

3. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆ-ಕುಂಟೆಗಳು, ಜಲಮೂಲಗಳು, ಜೀವಿ ವೈವಿಧ್ಯತೆಯನ್ನು ರಕ್ಷಿಸಿ, ಪರಂಪರೆಯ ಅನನ್ಯತೆಯನ್ನು ಉಳಿಸಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ದೊಡ್ಡಬಳ್ಳಾಪುರ ಸೇರಿದಂತೆ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಬಿಬಿಎಂಪಿ ಕಸ ಸಂಸ್ಕರಣಾ ನೂತನ ಘಟಕಗಳನ್ನು ತೆರೆಯಬಾರದು.

4. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಕನ್ನಡ ನುಡಿ ಎಲ್ಲ ಹಂತಗಳಲ್ಲೂ ಅನುಷ್ಠಾನಗೊಳ್ಳಬೇಕು. ಕನ್ನಡವನ್ನು ಭವಿಷ್ಯದ ಉದ್ಯೋಗದಾಯಿ ಭಾಷೆಯಾಗಿ ರೂಪಿಸುವ ನಿಟ್ಟಿನಲ್ಲಿ ವಿಜ್ಞಾನ, ತಂತ್ರಜ್ಞಾನ, ಆಡಳಿತ, ಕಾನೂನಿನ ಭಾಷೆಯಾಗಿ ರೂಪಿಸಲು ಕ್ರಮ ವಹಿಸಬೇಕು. ಪಾರಿಭಾಷಿಕ ಪದಕೋಶಗಳ ರಚನೆ ಮತ್ತು ಪ್ರಕಟಣೆಗೆ ಸರ್ಕಾರ ಮುಂದಾಗಬೇಕು.

5. ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಇರುವ ಕೈಗಾರಿಕಾ ವಸಾಹತುಗಳು, ಕಾರ್ಖಾನೆ, ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಬೇಕು. ಡಿ ದರ್ಜೆ ಹುದ್ದೆಗಳಿಗೆ ಮಾತ್ರ ಸೀಮಿತವಾಗದೆ, ಉನ್ನತ ಹಂತದ ಹುದ್ದೆಗಳಲ್ಲೂ ಸ್ಥಳೀಯರಿಗೆ ಮೀಸಲಾತಿ ಜಾರಿಗೊಳ್ಳಬೇಕು. ಉದ್ಯೋಗ ಕೌಶಲ್ಯಗಳ ತರಬೇತಿಗೆ ಕ್ರಮ ವಹಿಸಬೇಕು. ಜ್ಞಾನಾಧಾರಿತವಾಗಿ ಎಲ್ಲ ಭಾಷೆಗಳಿಗೂ ಮನ್ನಣೆ ನೀಡುವ ಕರ್ನಾಟಕದಲ್ಲಿ ಹಿಂದಿ ಸೇರಿದಂತೆ ಯಾವುದೇ ಭಾಷೆಯ ಬಲವಂತದ ಹೇರಿಕೆಯನ್ನು ಸಮ್ಮೇಳನ ಸ್ಪಷ್ಟವಾಗಿ ವಿರೋಧಿಸುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಬಹಿರಂಗ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.

ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಜಿಲ್ಲಾ ಕೋಶಾಧ್ಯಕ್ಷ ಡಾ.ಮುನಿರಾಜು, ಕಾರ್ಯದರ್ಶಿ ಅಶ್ವತ್ಥಗೌಡ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ದೇವರಾಜ್, ನೆಲಮಂಗಲ ತಾಲೂಕು ಕಾರ್ಯದರ್ಶಿ ಸದಾನಂದ ಆರಾಧ್ಯ, ಭಾನುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

7 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

13 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

14 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

18 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

19 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago