ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್, ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.
ರೈತರ ಬೇಡಿಕೆಗಳು
1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.
2. ರೈತರ ಕೃಷಿ ಭೂಮಿಯನ್ನು ಡಿಆರ್ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್ಗಳು ನಿಲ್ಲಿಸಬೇಕು.
3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.
4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…