ಬಲವಂತವಾಗಿ ಬ್ಯಾಂಕ್ ಸಾಲ ವಸೂಲಿ: ಯೂನಿಯನ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್‌ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್‌ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್‌ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್,  ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.

ರೈತರ ಬೇಡಿಕೆಗಳು

 1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.

 2. ರೈತರ ಕೃಷಿ ಭೂಮಿಯನ್ನು ಡಿಆರ್‌ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್‌ಗಳು ನಿಲ್ಲಿಸಬೇಕು.

 3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.

 4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 hour ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

2 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

2 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

6 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

17 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

18 hours ago