ಬಲವಂತವಾಗಿ ಬ್ಯಾಂಕ್ ಸಾಲ ವಸೂಲಿ: ಯೂನಿಯನ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್‌ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್‌ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್‌ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್,  ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.

ರೈತರ ಬೇಡಿಕೆಗಳು

 1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.

 2. ರೈತರ ಕೃಷಿ ಭೂಮಿಯನ್ನು ಡಿಆರ್‌ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್‌ಗಳು ನಿಲ್ಲಿಸಬೇಕು.

 3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.

 4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

3 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

10 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

16 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago