ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್, ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.
ರೈತರ ಬೇಡಿಕೆಗಳು
1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.
2. ರೈತರ ಕೃಷಿ ಭೂಮಿಯನ್ನು ಡಿಆರ್ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್ಗಳು ನಿಲ್ಲಿಸಬೇಕು.
3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.
4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…