ಬಲವಂತವಾಗಿ ಬ್ಯಾಂಕ್ ಸಾಲ ವಸೂಲಿ: ಯೂನಿಯನ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್‌ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್‌ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್‌ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್,  ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.

ರೈತರ ಬೇಡಿಕೆಗಳು

 1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.

 2. ರೈತರ ಕೃಷಿ ಭೂಮಿಯನ್ನು ಡಿಆರ್‌ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್‌ಗಳು ನಿಲ್ಲಿಸಬೇಕು.

 3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.

 4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

32 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago