ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್, ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.
ರೈತರ ಬೇಡಿಕೆಗಳು
1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.
2. ರೈತರ ಕೃಷಿ ಭೂಮಿಯನ್ನು ಡಿಆರ್ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್ಗಳು ನಿಲ್ಲಿಸಬೇಕು.
3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.
4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…