ಬಲವಂತವಾಗಿ ಬ್ಯಾಂಕ್ ಸಾಲ ವಸೂಲಿ: ಯೂನಿಯನ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್‌ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್‌ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ. ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್‌ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್,  ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.

ರೈತರ ಬೇಡಿಕೆಗಳು

 1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು.

 2. ರೈತರ ಕೃಷಿ ಭೂಮಿಯನ್ನು ಡಿಆರ್‌ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್‌ಗಳು ನಿಲ್ಲಿಸಬೇಕು.

 3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು.

 4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

8 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

14 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

16 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago