ಬಲಾಢ್ಯನಿಂದ ಸಾರ್ವಜನಿಕ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣಕ್ಕೆ ಯತ್ನ ಆರೋಪ: ವಿರೋಧವ್ಯಕ್ತಪಡಿಸಿದ ಜನ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ರಸ್ತೆ ಉಳಿಸುವ ಭರವಸೆ

ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆರೋಪಿಸಿದ ಜನರು ತಹಶೀಲ್ದಾರ್, ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.

ಯೆಸ್, ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕತ್ತಿಹೊಸಹಳ್ಳಿ ಗ್ರಾಮದಲ್ಲಿ. ರಸ್ತೆಯನ್ನು ಬಲಾಢ್ಯನಿಂದ ರಕ್ಷಿಸುವಂತೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ದಾಖಲೆಗಳನ್ನು ಪರಿಶೀಲನೆ‌‌ ನಡೆಸಿ, ಸರ್ವೇ ಕಾರ್ಯ ನಡೆಸಿ ಈಗಿರುವ ರಸ್ತೆಯನ್ನ ಹಾಗೇ ಉಳಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.

ಕತ್ತಿಹೊಸಹಳ್ಳಿಯಿಂದ ತರಬನಹಳ್ಳಿ, ಕಸಾಘಟ್ಟಾ, ಗುಟ್ಟಹಳ್ಳಿ ಜೋಯಿಸಾ ದೇವಸ್ಥಾನ‌ ಅಗ್ರಹಾರ, ಪಟ್ಟೆ ಬಸವಣ್ಣ ದೇವಸ್ಥಾನ, ಹೆಜ್ಜಾಜಿ ಆಸ್ಪತ್ರೆ, ನೆಲಮಂಗಲ ಹೆದ್ದಾರಿ ಸೇರಿದಂತೆ ಹಲವಾರು ಗ್ರಾಮಗಳನ್ನು ಸಂಪರ್ಕಿಸಲು ಇರುವ ಏಕೈಕ ರಸ್ತೆಯನ್ನು ಕತ್ತಿಹೊಸಹಳ್ಳಿ ಮೂಲದ ಬೆಂಗಳೂರಿನಲ್ಲಿ ವಾಸವಿರುವ ವಕೀಲ‌ ನರಸಿಂಹಯ್ಯ ಎಂಬ ವ್ಯಕ್ತಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ. ಮಾರ್ಕ್ ಮಾಡಿ ರಸ್ತೆಯನ್ನು ಒಡೆಯುವಾಗ ಗ್ರಾಮಸ್ಥರಾದ ನಾವು ರಸ್ತೆ ಉಳಿವಿಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್, ಹಾಗೂ ಪೊಲೀಸರ ಗಮನಕ್ಕೆ ತಂದಿದ್ದೇವೆ. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅವರು, ರಸ್ತೆ ಉಳಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥ ಚಿಕ್ಕವೀರಣ್ಣ ಹೇಳಿದರು.

ಕತ್ತಿಹೊಸಹಳ್ಳಿ ಗ್ರಾಮದ ಚೌಡನರಸಪ್ಪನವರ ಹೆಣ್ಣು ಮಕ್ಕಳ ಪಾಲಿಗೆ ಬಂದಿದ್ದ ಸುಮಾರು 15 ಗುಂಟೆ ಭೂಮಿಯನ್ನು ಇತ್ತೀಚೆಗೆ ವಕೀಲ ನರಸಿಂಹಯ್ಯ ಎಂಬ ವ್ಯಕ್ತಿ ಖರೀದಿ ಮಾಡಿದ್ದಾರೆ. ಈ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಅವರ ಜಮೀನಿಗೆ ಕಾಂಪೌಂಡ್ ನಿರ್ಮಿಸಿಕೊಂಡರೆ ನಮ್ಮದೇನು ಅಭ್ಯಂತರವಿಲ್ಲ. ಆದರೆ, ರಸ್ತೆ ನನ್ನ ಜಮೀನಿನಲ್ಲಿ ಹಾದುಹೋಗಿದೆ. ನಾನು ಯಾವುದೇ ಕಾರಣಕ್ಕೂ ನನ್ನ ಜಮೀನಿನಲ್ಲಿ ರಸ್ತೆಯನ್ನು ಬಿಡುವುದಿಲ್ಲ ಎಂದು ರಸ್ತೆಯನ್ನು ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದನ್ನು ನಾವು ಪ್ರಶ್ನೆ ಮಾಡಿದ್ದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹತ್ತಾರು ಗ್ರಾಮಗಳ ಜನರಿಗೆ ಅನುಕೂಲಕಕ್ಕಾಗಿರುವ ಏಕೈಕ ರಸ್ತೆಯನ್ನು ಒಡೆಯುವುದು ಎಷ್ಟರ ಮಟ್ಟಿಗೆ ಸರಿ, ನಾವು ಯಾವುದೇ ಕಾರಣಕ್ಕೂ ಈ ರಸ್ತೆಯನ್ನು ಬಿಟ್ಟುಕೊಡುವುದಿಲ್ಲ. ರಸ್ತೆ ಉಳಿವಿಗಾಗಿ ಉಗ್ರ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ರಸ್ತೆಗೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ. ಖುದ್ದಾಗಿ ನಾವು ಹಾಗೂ ಎಡಿಎಲ್ ಆರ್ ಉಪಸ್ಥಿಯಲ್ಲಿ ಸರ್ವೇ ಕಾರ್ಯ ನಡೆಸುತ್ತೇವೆ. ಶತಮಾನಗಳಿಂದ ಬಳಕೆಯಲ್ಲಿರುವ ರಸ್ತೆಯನ್ನು ಹಾಗೇ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

6 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

10 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

10 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

18 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago