ಬಲಾಢ್ಯನಿಂದ ಸಾರ್ವಜನಿಕ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣಕ್ಕೆ ಯತ್ನ ಆರೋಪ: ವಿರೋಧವ್ಯಕ್ತಪಡಿಸಿದ ಜನ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ರಸ್ತೆ ಉಳಿಸುವ ಭರವಸೆ

ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆರೋಪಿಸಿದ ಜನರು ತಹಶೀಲ್ದಾರ್, ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.

ಯೆಸ್, ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕತ್ತಿಹೊಸಹಳ್ಳಿ ಗ್ರಾಮದಲ್ಲಿ. ರಸ್ತೆಯನ್ನು ಬಲಾಢ್ಯನಿಂದ ರಕ್ಷಿಸುವಂತೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ದಾಖಲೆಗಳನ್ನು ಪರಿಶೀಲನೆ‌‌ ನಡೆಸಿ, ಸರ್ವೇ ಕಾರ್ಯ ನಡೆಸಿ ಈಗಿರುವ ರಸ್ತೆಯನ್ನ ಹಾಗೇ ಉಳಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.

ಕತ್ತಿಹೊಸಹಳ್ಳಿಯಿಂದ ತರಬನಹಳ್ಳಿ, ಕಸಾಘಟ್ಟಾ, ಗುಟ್ಟಹಳ್ಳಿ ಜೋಯಿಸಾ ದೇವಸ್ಥಾನ‌ ಅಗ್ರಹಾರ, ಪಟ್ಟೆ ಬಸವಣ್ಣ ದೇವಸ್ಥಾನ, ಹೆಜ್ಜಾಜಿ ಆಸ್ಪತ್ರೆ, ನೆಲಮಂಗಲ ಹೆದ್ದಾರಿ ಸೇರಿದಂತೆ ಹಲವಾರು ಗ್ರಾಮಗಳನ್ನು ಸಂಪರ್ಕಿಸಲು ಇರುವ ಏಕೈಕ ರಸ್ತೆಯನ್ನು ಕತ್ತಿಹೊಸಹಳ್ಳಿ ಮೂಲದ ಬೆಂಗಳೂರಿನಲ್ಲಿ ವಾಸವಿರುವ ವಕೀಲ‌ ನರಸಿಂಹಯ್ಯ ಎಂಬ ವ್ಯಕ್ತಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ. ಮಾರ್ಕ್ ಮಾಡಿ ರಸ್ತೆಯನ್ನು ಒಡೆಯುವಾಗ ಗ್ರಾಮಸ್ಥರಾದ ನಾವು ರಸ್ತೆ ಉಳಿವಿಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್, ಹಾಗೂ ಪೊಲೀಸರ ಗಮನಕ್ಕೆ ತಂದಿದ್ದೇವೆ. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅವರು, ರಸ್ತೆ ಉಳಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥ ಚಿಕ್ಕವೀರಣ್ಣ ಹೇಳಿದರು.

ಕತ್ತಿಹೊಸಹಳ್ಳಿ ಗ್ರಾಮದ ಚೌಡನರಸಪ್ಪನವರ ಹೆಣ್ಣು ಮಕ್ಕಳ ಪಾಲಿಗೆ ಬಂದಿದ್ದ ಸುಮಾರು 15 ಗುಂಟೆ ಭೂಮಿಯನ್ನು ಇತ್ತೀಚೆಗೆ ವಕೀಲ ನರಸಿಂಹಯ್ಯ ಎಂಬ ವ್ಯಕ್ತಿ ಖರೀದಿ ಮಾಡಿದ್ದಾರೆ. ಈ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಅವರ ಜಮೀನಿಗೆ ಕಾಂಪೌಂಡ್ ನಿರ್ಮಿಸಿಕೊಂಡರೆ ನಮ್ಮದೇನು ಅಭ್ಯಂತರವಿಲ್ಲ. ಆದರೆ, ರಸ್ತೆ ನನ್ನ ಜಮೀನಿನಲ್ಲಿ ಹಾದುಹೋಗಿದೆ. ನಾನು ಯಾವುದೇ ಕಾರಣಕ್ಕೂ ನನ್ನ ಜಮೀನಿನಲ್ಲಿ ರಸ್ತೆಯನ್ನು ಬಿಡುವುದಿಲ್ಲ ಎಂದು ರಸ್ತೆಯನ್ನು ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದನ್ನು ನಾವು ಪ್ರಶ್ನೆ ಮಾಡಿದ್ದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹತ್ತಾರು ಗ್ರಾಮಗಳ ಜನರಿಗೆ ಅನುಕೂಲಕಕ್ಕಾಗಿರುವ ಏಕೈಕ ರಸ್ತೆಯನ್ನು ಒಡೆಯುವುದು ಎಷ್ಟರ ಮಟ್ಟಿಗೆ ಸರಿ, ನಾವು ಯಾವುದೇ ಕಾರಣಕ್ಕೂ ಈ ರಸ್ತೆಯನ್ನು ಬಿಟ್ಟುಕೊಡುವುದಿಲ್ಲ. ರಸ್ತೆ ಉಳಿವಿಗಾಗಿ ಉಗ್ರ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ರಸ್ತೆಗೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ. ಖುದ್ದಾಗಿ ನಾವು ಹಾಗೂ ಎಡಿಎಲ್ ಆರ್ ಉಪಸ್ಥಿಯಲ್ಲಿ ಸರ್ವೇ ಕಾರ್ಯ ನಡೆಸುತ್ತೇವೆ. ಶತಮಾನಗಳಿಂದ ಬಳಕೆಯಲ್ಲಿರುವ ರಸ್ತೆಯನ್ನು ಹಾಗೇ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

41 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago