ಬಲಾಢ್ಯನಿಂದ ಸಾರ್ವಜನಿಕ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣಕ್ಕೆ ಯತ್ನ ಆರೋಪ: ವಿರೋಧವ್ಯಕ್ತಪಡಿಸಿದ ಜನ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ರಸ್ತೆ ಉಳಿಸುವ ಭರವಸೆ

ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆರೋಪಿಸಿದ ಜನರು ತಹಶೀಲ್ದಾರ್, ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.

ಯೆಸ್, ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕತ್ತಿಹೊಸಹಳ್ಳಿ ಗ್ರಾಮದಲ್ಲಿ. ರಸ್ತೆಯನ್ನು ಬಲಾಢ್ಯನಿಂದ ರಕ್ಷಿಸುವಂತೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ದಾಖಲೆಗಳನ್ನು ಪರಿಶೀಲನೆ‌‌ ನಡೆಸಿ, ಸರ್ವೇ ಕಾರ್ಯ ನಡೆಸಿ ಈಗಿರುವ ರಸ್ತೆಯನ್ನ ಹಾಗೇ ಉಳಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.

ಕತ್ತಿಹೊಸಹಳ್ಳಿಯಿಂದ ತರಬನಹಳ್ಳಿ, ಕಸಾಘಟ್ಟಾ, ಗುಟ್ಟಹಳ್ಳಿ ಜೋಯಿಸಾ ದೇವಸ್ಥಾನ‌ ಅಗ್ರಹಾರ, ಪಟ್ಟೆ ಬಸವಣ್ಣ ದೇವಸ್ಥಾನ, ಹೆಜ್ಜಾಜಿ ಆಸ್ಪತ್ರೆ, ನೆಲಮಂಗಲ ಹೆದ್ದಾರಿ ಸೇರಿದಂತೆ ಹಲವಾರು ಗ್ರಾಮಗಳನ್ನು ಸಂಪರ್ಕಿಸಲು ಇರುವ ಏಕೈಕ ರಸ್ತೆಯನ್ನು ಕತ್ತಿಹೊಸಹಳ್ಳಿ ಮೂಲದ ಬೆಂಗಳೂರಿನಲ್ಲಿ ವಾಸವಿರುವ ವಕೀಲ‌ ನರಸಿಂಹಯ್ಯ ಎಂಬ ವ್ಯಕ್ತಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ. ಮಾರ್ಕ್ ಮಾಡಿ ರಸ್ತೆಯನ್ನು ಒಡೆಯುವಾಗ ಗ್ರಾಮಸ್ಥರಾದ ನಾವು ರಸ್ತೆ ಉಳಿವಿಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್, ಹಾಗೂ ಪೊಲೀಸರ ಗಮನಕ್ಕೆ ತಂದಿದ್ದೇವೆ. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅವರು, ರಸ್ತೆ ಉಳಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥ ಚಿಕ್ಕವೀರಣ್ಣ ಹೇಳಿದರು.

ಕತ್ತಿಹೊಸಹಳ್ಳಿ ಗ್ರಾಮದ ಚೌಡನರಸಪ್ಪನವರ ಹೆಣ್ಣು ಮಕ್ಕಳ ಪಾಲಿಗೆ ಬಂದಿದ್ದ ಸುಮಾರು 15 ಗುಂಟೆ ಭೂಮಿಯನ್ನು ಇತ್ತೀಚೆಗೆ ವಕೀಲ ನರಸಿಂಹಯ್ಯ ಎಂಬ ವ್ಯಕ್ತಿ ಖರೀದಿ ಮಾಡಿದ್ದಾರೆ. ಈ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಅವರ ಜಮೀನಿಗೆ ಕಾಂಪೌಂಡ್ ನಿರ್ಮಿಸಿಕೊಂಡರೆ ನಮ್ಮದೇನು ಅಭ್ಯಂತರವಿಲ್ಲ. ಆದರೆ, ರಸ್ತೆ ನನ್ನ ಜಮೀನಿನಲ್ಲಿ ಹಾದುಹೋಗಿದೆ. ನಾನು ಯಾವುದೇ ಕಾರಣಕ್ಕೂ ನನ್ನ ಜಮೀನಿನಲ್ಲಿ ರಸ್ತೆಯನ್ನು ಬಿಡುವುದಿಲ್ಲ ಎಂದು ರಸ್ತೆಯನ್ನು ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದನ್ನು ನಾವು ಪ್ರಶ್ನೆ ಮಾಡಿದ್ದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹತ್ತಾರು ಗ್ರಾಮಗಳ ಜನರಿಗೆ ಅನುಕೂಲಕಕ್ಕಾಗಿರುವ ಏಕೈಕ ರಸ್ತೆಯನ್ನು ಒಡೆಯುವುದು ಎಷ್ಟರ ಮಟ್ಟಿಗೆ ಸರಿ, ನಾವು ಯಾವುದೇ ಕಾರಣಕ್ಕೂ ಈ ರಸ್ತೆಯನ್ನು ಬಿಟ್ಟುಕೊಡುವುದಿಲ್ಲ. ರಸ್ತೆ ಉಳಿವಿಗಾಗಿ ಉಗ್ರ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ರಸ್ತೆಗೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ. ಖುದ್ದಾಗಿ ನಾವು ಹಾಗೂ ಎಡಿಎಲ್ ಆರ್ ಉಪಸ್ಥಿಯಲ್ಲಿ ಸರ್ವೇ ಕಾರ್ಯ ನಡೆಸುತ್ತೇವೆ. ಶತಮಾನಗಳಿಂದ ಬಳಕೆಯಲ್ಲಿರುವ ರಸ್ತೆಯನ್ನು ಹಾಗೇ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

3 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago