ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆರೋಪಿಸಿದ ಜನರು ತಹಶೀಲ್ದಾರ್, ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.
ಯೆಸ್, ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕತ್ತಿಹೊಸಹಳ್ಳಿ ಗ್ರಾಮದಲ್ಲಿ. ರಸ್ತೆಯನ್ನು ಬಲಾಢ್ಯನಿಂದ ರಕ್ಷಿಸುವಂತೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ದಾಖಲೆಗಳನ್ನು ಪರಿಶೀಲನೆ ನಡೆಸಿ, ಸರ್ವೇ ಕಾರ್ಯ ನಡೆಸಿ ಈಗಿರುವ ರಸ್ತೆಯನ್ನ ಹಾಗೇ ಉಳಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.
ಕತ್ತಿಹೊಸಹಳ್ಳಿಯಿಂದ ತರಬನಹಳ್ಳಿ, ಕಸಾಘಟ್ಟಾ, ಗುಟ್ಟಹಳ್ಳಿ ಜೋಯಿಸಾ ದೇವಸ್ಥಾನ ಅಗ್ರಹಾರ, ಪಟ್ಟೆ ಬಸವಣ್ಣ ದೇವಸ್ಥಾನ, ಹೆಜ್ಜಾಜಿ ಆಸ್ಪತ್ರೆ, ನೆಲಮಂಗಲ ಹೆದ್ದಾರಿ ಸೇರಿದಂತೆ ಹಲವಾರು ಗ್ರಾಮಗಳನ್ನು ಸಂಪರ್ಕಿಸಲು ಇರುವ ಏಕೈಕ ರಸ್ತೆಯನ್ನು ಕತ್ತಿಹೊಸಹಳ್ಳಿ ಮೂಲದ ಬೆಂಗಳೂರಿನಲ್ಲಿ ವಾಸವಿರುವ ವಕೀಲ ನರಸಿಂಹಯ್ಯ ಎಂಬ ವ್ಯಕ್ತಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ. ಮಾರ್ಕ್ ಮಾಡಿ ರಸ್ತೆಯನ್ನು ಒಡೆಯುವಾಗ ಗ್ರಾಮಸ್ಥರಾದ ನಾವು ರಸ್ತೆ ಉಳಿವಿಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್, ಹಾಗೂ ಪೊಲೀಸರ ಗಮನಕ್ಕೆ ತಂದಿದ್ದೇವೆ. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅವರು, ರಸ್ತೆ ಉಳಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥ ಚಿಕ್ಕವೀರಣ್ಣ ಹೇಳಿದರು.
ಕತ್ತಿಹೊಸಹಳ್ಳಿ ಗ್ರಾಮದ ಚೌಡನರಸಪ್ಪನವರ ಹೆಣ್ಣು ಮಕ್ಕಳ ಪಾಲಿಗೆ ಬಂದಿದ್ದ ಸುಮಾರು 15 ಗುಂಟೆ ಭೂಮಿಯನ್ನು ಇತ್ತೀಚೆಗೆ ವಕೀಲ ನರಸಿಂಹಯ್ಯ ಎಂಬ ವ್ಯಕ್ತಿ ಖರೀದಿ ಮಾಡಿದ್ದಾರೆ. ಈ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಅವರ ಜಮೀನಿಗೆ ಕಾಂಪೌಂಡ್ ನಿರ್ಮಿಸಿಕೊಂಡರೆ ನಮ್ಮದೇನು ಅಭ್ಯಂತರವಿಲ್ಲ. ಆದರೆ, ರಸ್ತೆ ನನ್ನ ಜಮೀನಿನಲ್ಲಿ ಹಾದುಹೋಗಿದೆ. ನಾನು ಯಾವುದೇ ಕಾರಣಕ್ಕೂ ನನ್ನ ಜಮೀನಿನಲ್ಲಿ ರಸ್ತೆಯನ್ನು ಬಿಡುವುದಿಲ್ಲ ಎಂದು ರಸ್ತೆಯನ್ನು ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದನ್ನು ನಾವು ಪ್ರಶ್ನೆ ಮಾಡಿದ್ದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹತ್ತಾರು ಗ್ರಾಮಗಳ ಜನರಿಗೆ ಅನುಕೂಲಕಕ್ಕಾಗಿರುವ ಏಕೈಕ ರಸ್ತೆಯನ್ನು ಒಡೆಯುವುದು ಎಷ್ಟರ ಮಟ್ಟಿಗೆ ಸರಿ, ನಾವು ಯಾವುದೇ ಕಾರಣಕ್ಕೂ ಈ ರಸ್ತೆಯನ್ನು ಬಿಟ್ಟುಕೊಡುವುದಿಲ್ಲ. ರಸ್ತೆ ಉಳಿವಿಗಾಗಿ ಉಗ್ರ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ರಸ್ತೆಗೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ. ಖುದ್ದಾಗಿ ನಾವು ಹಾಗೂ ಎಡಿಎಲ್ ಆರ್ ಉಪಸ್ಥಿಯಲ್ಲಿ ಸರ್ವೇ ಕಾರ್ಯ ನಡೆಸುತ್ತೇವೆ. ಶತಮಾನಗಳಿಂದ ಬಳಕೆಯಲ್ಲಿರುವ ರಸ್ತೆಯನ್ನು ಹಾಗೇ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…