ಬಲಾಢ್ಯನಿಂದ ಸಾರ್ವಜನಿಕ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣಕ್ಕೆ ಯತ್ನ ಆರೋಪ: ವಿರೋಧವ್ಯಕ್ತಪಡಿಸಿದ ಜನ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ರಸ್ತೆ ಉಳಿಸುವ ಭರವಸೆ

ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆರೋಪಿಸಿದ ಜನರು ತಹಶೀಲ್ದಾರ್, ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ.

ಯೆಸ್, ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕತ್ತಿಹೊಸಹಳ್ಳಿ ಗ್ರಾಮದಲ್ಲಿ. ರಸ್ತೆಯನ್ನು ಬಲಾಢ್ಯನಿಂದ ರಕ್ಷಿಸುವಂತೆ ಸಾರ್ವಜನಿಕರಿಂದ ಬಂದ ದೂರಿನ‌ ಮೇರೆಗೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ದಾಖಲೆಗಳನ್ನು ಪರಿಶೀಲನೆ‌‌ ನಡೆಸಿ, ಸರ್ವೇ ಕಾರ್ಯ ನಡೆಸಿ ಈಗಿರುವ ರಸ್ತೆಯನ್ನ ಹಾಗೇ ಉಳಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.

ಕತ್ತಿಹೊಸಹಳ್ಳಿಯಿಂದ ತರಬನಹಳ್ಳಿ, ಕಸಾಘಟ್ಟಾ, ಗುಟ್ಟಹಳ್ಳಿ ಜೋಯಿಸಾ ದೇವಸ್ಥಾನ‌ ಅಗ್ರಹಾರ, ಪಟ್ಟೆ ಬಸವಣ್ಣ ದೇವಸ್ಥಾನ, ಹೆಜ್ಜಾಜಿ ಆಸ್ಪತ್ರೆ, ನೆಲಮಂಗಲ ಹೆದ್ದಾರಿ ಸೇರಿದಂತೆ ಹಲವಾರು ಗ್ರಾಮಗಳನ್ನು ಸಂಪರ್ಕಿಸಲು ಇರುವ ಏಕೈಕ ರಸ್ತೆಯನ್ನು ಕತ್ತಿಹೊಸಹಳ್ಳಿ ಮೂಲದ ಬೆಂಗಳೂರಿನಲ್ಲಿ ವಾಸವಿರುವ ವಕೀಲ‌ ನರಸಿಂಹಯ್ಯ ಎಂಬ ವ್ಯಕ್ತಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ. ಮಾರ್ಕ್ ಮಾಡಿ ರಸ್ತೆಯನ್ನು ಒಡೆಯುವಾಗ ಗ್ರಾಮಸ್ಥರಾದ ನಾವು ರಸ್ತೆ ಉಳಿವಿಗಾಗಿ ತೀವ್ರ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್, ಹಾಗೂ ಪೊಲೀಸರ ಗಮನಕ್ಕೆ ತಂದಿದ್ದೇವೆ. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅವರು, ರಸ್ತೆ ಉಳಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥ ಚಿಕ್ಕವೀರಣ್ಣ ಹೇಳಿದರು.

ಕತ್ತಿಹೊಸಹಳ್ಳಿ ಗ್ರಾಮದ ಚೌಡನರಸಪ್ಪನವರ ಹೆಣ್ಣು ಮಕ್ಕಳ ಪಾಲಿಗೆ ಬಂದಿದ್ದ ಸುಮಾರು 15 ಗುಂಟೆ ಭೂಮಿಯನ್ನು ಇತ್ತೀಚೆಗೆ ವಕೀಲ ನರಸಿಂಹಯ್ಯ ಎಂಬ ವ್ಯಕ್ತಿ ಖರೀದಿ ಮಾಡಿದ್ದಾರೆ. ಈ ಜಮೀನಿಗೆ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾರೆ. ಅವರ ಜಮೀನಿಗೆ ಕಾಂಪೌಂಡ್ ನಿರ್ಮಿಸಿಕೊಂಡರೆ ನಮ್ಮದೇನು ಅಭ್ಯಂತರವಿಲ್ಲ. ಆದರೆ, ರಸ್ತೆ ನನ್ನ ಜಮೀನಿನಲ್ಲಿ ಹಾದುಹೋಗಿದೆ. ನಾನು ಯಾವುದೇ ಕಾರಣಕ್ಕೂ ನನ್ನ ಜಮೀನಿನಲ್ಲಿ ರಸ್ತೆಯನ್ನು ಬಿಡುವುದಿಲ್ಲ ಎಂದು ರಸ್ತೆಯನ್ನು ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದನ್ನು ನಾವು ಪ್ರಶ್ನೆ ಮಾಡಿದ್ದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹತ್ತಾರು ಗ್ರಾಮಗಳ ಜನರಿಗೆ ಅನುಕೂಲಕಕ್ಕಾಗಿರುವ ಏಕೈಕ ರಸ್ತೆಯನ್ನು ಒಡೆಯುವುದು ಎಷ್ಟರ ಮಟ್ಟಿಗೆ ಸರಿ, ನಾವು ಯಾವುದೇ ಕಾರಣಕ್ಕೂ ಈ ರಸ್ತೆಯನ್ನು ಬಿಟ್ಟುಕೊಡುವುದಿಲ್ಲ. ರಸ್ತೆ ಉಳಿವಿಗಾಗಿ ಉಗ್ರ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಗ್ರಾಮಸ್ಥರು ಎಚ್ಚರಿಸಿದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ರಸ್ತೆಗೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತೇವೆ. ಖುದ್ದಾಗಿ ನಾವು ಹಾಗೂ ಎಡಿಎಲ್ ಆರ್ ಉಪಸ್ಥಿಯಲ್ಲಿ ಸರ್ವೇ ಕಾರ್ಯ ನಡೆಸುತ್ತೇವೆ. ಶತಮಾನಗಳಿಂದ ಬಳಕೆಯಲ್ಲಿರುವ ರಸ್ತೆಯನ್ನು ಹಾಗೇ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

10 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

11 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

22 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

22 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

22 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago