ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

1 hour ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

17 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

18 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago