ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

20 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago