ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು.

ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿದೆ. ಇವೆಲ್ಲದರ ನಡುವೆ ಮಳೆ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಆಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆದಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತಿವೆ.

ನಗರದ ರಸ್ತೆಗಳಲ್ಲಿ ಗುಂಡಿಗಳು ಇವೆ, ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ, ಆನೇಕ‌ ಜ‌ನರು ಗಾಡಿಗಳನ್ನು ಗೊತ್ತಿಲ್ಲದೆ ಆಕಸ್ಮಿಕವಾಗಿ ಗುಂಡಿಗೆ ಇಳಿಸಿ ಕೈಕಾಲು ಮುರಿದುಕೊಂಡಿದ್ದಾರೆ. ಇಷ್ಟಾದರೂ ಸಂಬಂಧಿಸಿದ ಇಲಾಖೆ ಗುಂಡಿ ಮುಚ್ಚುವ ಕೆಲಸ‌ ಮಾಡುತ್ತಿಲ್ಲ. ಇಲಾಖೆಗಳು, ಜನಪತ್ರಿನಿಧಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗುತ್ತಿದ್ದಾರೆ ಎಂದು ನಗರದ ನಿವಾಸಿ ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದರು.

ಗುಂಡಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನ ಆಗಲಿಲ್ಲ, ಇದರಿಂದ ಬೇಸತ್ತು ಸಾರ್ವಜನಿಕರೇ ಕೆಲವು ಕಡೆ ಮಣ್ಣಿನಿಂದ ಗುಂಡಿ‌ ಮುಚ್ಚಿ ಓಡಾಡುತ್ತಿದ್ದಾರೆ ಎಂದರು.

ಒಟ್ಟಾರೆ ನಗರದ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ, ಇನ್ನಾದರೂ ಗುಂಡಿ‌ ಮುಕ್ತ ನಗರ ಆಗುತ್ತಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago